ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಕಾಲೊನಿಯಲ್ಲಿ ಗೋಪೂಜೆ

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ.ರಘುಪತಿ ಭಟ್ ಭಾಗಿ
Last Updated 6 ನವೆಂಬರ್ 2021, 15:24 IST
ಅಕ್ಷರ ಗಾತ್ರ

ಉಡುಪಿ: ದೊಡ್ಡಣಗುಡ್ಡೆಯ ಅಂಬೇಡ್ಕರ್ ಕಾಲೊನಿಯಲ್ಲಿರುವ ಕಮಲಮ್ಮ ಅವರ ಗೋಶಾಲೆಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಕೆ.ರಘುಪತಿ ಭಟ್ ಗೋ ಪೂಜೆ ನೆರವೇರಿಸಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ಕಮಲಮ್ಮ ಕುಟುಂಬಕ್ಕೆ ಹೊಸ ಬಟ್ಟೆ ಹಾಗೂ ಸಿಹಿ ತಿಂಡಿ ವಿತರಿಸಿ, ಹಸುಗಳಿಗೆ ಕ್ವಿಂಟಲ್ ಹಿಂಡಿ ಉಡುಗೊರೆ ನೀಡಲಾಯಿತು.

ಗೋಶಾಲೆಯ ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಶಾಸಕರು ಮಾಡಿದ ಮನವಿ ಸ್ಪಂದಿಸಿದ ಸಚಿವರು ಶೀಘ್ರ ಸೂಕ್ತ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ದಿನಕರ ಬಾಬು, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜೆ, ಸ್ಥಳೀಯ ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ಗಿರಿಧರ್ ಆಚಾರ್ಯ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕರಂಬಳ್ಳಿ, ಪ್ರೊ.ಸದಾಶಿವ ರಾವ್, ಎಸ್.ವಿ. ಭಟ್, ವಾಸುದೇವ್ ಭಟ್ ಇದ್ದರು.

ಕೃಷಿ ಭೂಮಿಯಲ್ಲಿ ದೀಪಾವಳಿ:

ದಶಕಗಳಿಂದ ಹಡಿಲಿಬಿದ್ದಿದ್ದ ಕೃಷಿ ಭೂಮಿಯಲ್ಲಿ ಕೇದಾರೋತ್ಥಾನ ಟ್ರಸ್ಟ್‌ ಭತ್ತದ ಕೃಷಿ ಮಾಡಿದ್ದು, ಈ ಗದ್ದೆಗಳಲ್ಲಿ ಶಾಸಕ ಕೆ.ರಘುಪತಿ ಭಟ್‌ ದೀಪಗಳನ್ನಿಟ್ಟು ವಿಭಿನ್ನವಾಗಿ ದೀಪಾವಳಿ ಆಚರಿಸಿದರು.

ಸಾಂಪ್ರದಾಯಿಕ ಪದ್ಧತಿಯಂತೆ ದೀಪ ಇಟ್ಟು ಬಲೀಂದ್ರ ಪೂಜೆ (ಹೊಲಿ ಕರೆಯುವುದು) ಮಾಡಲಾಯಿತು. ಬಳಿಕ ಪೈರಿನ ಪೂಜೆ, ತಿರಿಗೆ ಭತ್ತವನ್ನು ಹಾಕುವ ಮೂಲಕ ದೀಪಾವಳಿಯನ್ನು ಸಂಭ್ರಮಿಸಲಾಯಿತು.

ಉಡುಪಿಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನಂಜೆ, ಕಲ್ಮಾಡಿ, ಸುಬ್ರಹ್ಮಣ್ಯನಗರ, ಮೂಡುಬೆಟ್ಟು, ಗುಂಡಿಬೈಲು, ಪರ್ಕಳ, ತೆಂಕನಿಡಿಯೂರು, ಬಡಾನಿಡಿಯೂರು, ಕಲ್ಯಾಣಪುರ, ಆರೂರು ಸೇರಿದಂತೆ ಹಲವು ಕಡೆಗಳಲ್ಲಿ ಈ ವರ್ಷ 1,500 ಎಕರೆ ಹಡಿಲು ಭೂಮಿ ಕೃಷಿ ನಡೆದಿದ್ದು, ಎಲ್ಲ ಭಾಗಗಳಲ್ಲಿ ಸಾರ್ವಜನಿಕರು ಗದ್ದೆಗಳಲ್ಲಿ ದೀಪಾವಳಿ ಆಚರಿಸಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಶಾಸಕ ರಘುಪತಿ ಭಟ್ ಅವರ ನಿವಾಸದಲ್ಲೂ ಗೋ ಪೂಜಾ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT