<p><strong>ಉಡುಪಿ:</strong> ಧರ್ಮ ಹಾಗೂ ಹಿಂದುತ್ವಕ್ಕಾಗಿ ಯಾವ ಬಿಜೆಪಿ ಮುಖಂಡರೂ ಜೀವ ಕಳೆದುಕೊಂಡಿಲ್ಲ. ಅಮಾಯಕರ ಜೀವಗಳ ಮೇಲೆ ಅಧಿಕಾರ ಗದ್ದುಗೆ ಏರುತ್ತಿದ್ದಾರೆ. ಇದಕ್ಕೆ ಕರಾವಳಿ ಜನರು ಅವಕಾಶ ಕೊಡಬೇಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.</p>.<p>ಬೈಂದೂರು ತಾಲ್ಲೂಕಿನ ತ್ರಾಸಿಯ ಕಾರ್ವಿ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಹಿಂದುತ್ವ, ಧರ್ಮದ ವಿಚಾರವನ್ನು ಬದಿಗಿಟ್ಟು ಕರಾವಳಿ ಭಾಗದ ಅಭಿವೃದ್ಧಿಗೆ ಹೋರಾಟ ಮಾಡಿ’ ಎಂದು ಸಲಹೆ ನೀಡಿದರು.</p>.<p>ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆದ್ದು ಬಂದಿರುವ ಬಿಜೆಪಿ ನಾಯಕರು, ಸಮಸ್ಯೆಗಳಿಗೆ ಸ್ಪಂದಿಸದೆ ಎಸಿ ರೂಂನಲ್ಲಿ ಕುಳಿತಿದ್ದಾರೆ. ಮತದಾರರು ಮಾತ್ರ ಬಿಸಿಲಿನಲ್ಲಿ ಒಣಗುತ್ತಿದ್ದಾರೆ. ಧರ್ಮವನ್ನು ಎಲ್ಲರೂ ಸೇರಿ ಕಾಪಾಡೋಣ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದರೆ ಒಗ್ಗಟ್ಟಾಗಿ ಹೋರಾಡೋಣ’ ಎಂದರು.</p>.<p>ಸರ್ಕಾರ ಈಗ ಬೀಳುತ್ತೆ, ನಾಳೆ ಬೀಳುತ್ತೆ ಎಂದು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ. ಕನಸು ಈಡೇರುವುದಿಲ್ಲ. ದೈವ ಪ್ರೇರಣೆಯಿಂದ ಮೈತ್ರಿ ಸರ್ಕಾರ ರಚನೆಯಾಗಿದೆ. ಸರ್ಕಾರದ ಆಯಸ್ಸನ್ನು ದೇವರೇ ನಿರ್ಧರಿಸಲಿದ್ದಾನೆ. ಯಡಿಯೂರಪ್ಪನವರು ಸರ್ಕಾರ ಬೀಳಲಿದೆ ಎಂದರೆ ಬೀಳುವುದಿಲ್ಲ ಎಂದು ತಿರುಗೇಟು ನೀಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ, ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ, ಪರಿಷತ್ ಸದಸ್ಯ ಭೋಜೇಗೌಡ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಧರ್ಮ ಹಾಗೂ ಹಿಂದುತ್ವಕ್ಕಾಗಿ ಯಾವ ಬಿಜೆಪಿ ಮುಖಂಡರೂ ಜೀವ ಕಳೆದುಕೊಂಡಿಲ್ಲ. ಅಮಾಯಕರ ಜೀವಗಳ ಮೇಲೆ ಅಧಿಕಾರ ಗದ್ದುಗೆ ಏರುತ್ತಿದ್ದಾರೆ. ಇದಕ್ಕೆ ಕರಾವಳಿ ಜನರು ಅವಕಾಶ ಕೊಡಬೇಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.</p>.<p>ಬೈಂದೂರು ತಾಲ್ಲೂಕಿನ ತ್ರಾಸಿಯ ಕಾರ್ವಿ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಹಿಂದುತ್ವ, ಧರ್ಮದ ವಿಚಾರವನ್ನು ಬದಿಗಿಟ್ಟು ಕರಾವಳಿ ಭಾಗದ ಅಭಿವೃದ್ಧಿಗೆ ಹೋರಾಟ ಮಾಡಿ’ ಎಂದು ಸಲಹೆ ನೀಡಿದರು.</p>.<p>ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆದ್ದು ಬಂದಿರುವ ಬಿಜೆಪಿ ನಾಯಕರು, ಸಮಸ್ಯೆಗಳಿಗೆ ಸ್ಪಂದಿಸದೆ ಎಸಿ ರೂಂನಲ್ಲಿ ಕುಳಿತಿದ್ದಾರೆ. ಮತದಾರರು ಮಾತ್ರ ಬಿಸಿಲಿನಲ್ಲಿ ಒಣಗುತ್ತಿದ್ದಾರೆ. ಧರ್ಮವನ್ನು ಎಲ್ಲರೂ ಸೇರಿ ಕಾಪಾಡೋಣ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದರೆ ಒಗ್ಗಟ್ಟಾಗಿ ಹೋರಾಡೋಣ’ ಎಂದರು.</p>.<p>ಸರ್ಕಾರ ಈಗ ಬೀಳುತ್ತೆ, ನಾಳೆ ಬೀಳುತ್ತೆ ಎಂದು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ. ಕನಸು ಈಡೇರುವುದಿಲ್ಲ. ದೈವ ಪ್ರೇರಣೆಯಿಂದ ಮೈತ್ರಿ ಸರ್ಕಾರ ರಚನೆಯಾಗಿದೆ. ಸರ್ಕಾರದ ಆಯಸ್ಸನ್ನು ದೇವರೇ ನಿರ್ಧರಿಸಲಿದ್ದಾನೆ. ಯಡಿಯೂರಪ್ಪನವರು ಸರ್ಕಾರ ಬೀಳಲಿದೆ ಎಂದರೆ ಬೀಳುವುದಿಲ್ಲ ಎಂದು ತಿರುಗೇಟು ನೀಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ, ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ, ಪರಿಷತ್ ಸದಸ್ಯ ಭೋಜೇಗೌಡ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>