<p><strong>ಉಡುಪಿ</strong>: ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯು ದುರುಪಯೋಗವಾಗುವ ಸಾಧ್ಯತೆ ಇರುವುದರಿಂದ ಅದನ್ನು ಜಾರಿಗೆ ತರಬಾರದು’ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆಗ್ರಹಿಸಿದರು.</p>.<p>ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕಾನೂನು ತಜ್ಞರೊಂದಿಗೆ ಯಾವುದೇ ಚರ್ಚೆ ನಡೆಸದೆ ಈ ಮಸೂದೆಯನ್ನು ಜಾರಿಗೆ ತರಲು ಹೊರಟಿರುವುದು ದುರುದ್ದೇಶದಿಂದ ಕೂಡಿರುವ ತೀರ್ಮಾನವಾಗಿದೆ’ ಎಂದರು.</p>.<p>‘ಕರ್ನಾಟಕವು ಹಿಟ್ಲರ್ ಸಾಮ್ರಾಜ್ಯದಂತಾಗಿದ್ದು, ಇದು ಕಿರುಕುಳ ನೀಡಲು ತಂದಿರುವ ಮಸೂದೆಯಾಗಿದೆ’ ಎಂದು ಹೇಳಿದರು.</p>.<p>‘ಮಸೂದೆಯು ದುರುಪಯೋಗವಾಗದು ಎನ್ನುವುದಕ್ಕೆ ಏನು ಗ್ಯಾರೆಂಟಿ ಇದೆ? ಮುಖ್ಯಮಂತ್ರಿಯನ್ನು ಟೀಕಿಸಿದರೂ ಇದರಡಿ ಪ್ರಕರಣ ದಾಖಲಾಗಬಹುದು’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಾಪು, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯು ದುರುಪಯೋಗವಾಗುವ ಸಾಧ್ಯತೆ ಇರುವುದರಿಂದ ಅದನ್ನು ಜಾರಿಗೆ ತರಬಾರದು’ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆಗ್ರಹಿಸಿದರು.</p>.<p>ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕಾನೂನು ತಜ್ಞರೊಂದಿಗೆ ಯಾವುದೇ ಚರ್ಚೆ ನಡೆಸದೆ ಈ ಮಸೂದೆಯನ್ನು ಜಾರಿಗೆ ತರಲು ಹೊರಟಿರುವುದು ದುರುದ್ದೇಶದಿಂದ ಕೂಡಿರುವ ತೀರ್ಮಾನವಾಗಿದೆ’ ಎಂದರು.</p>.<p>‘ಕರ್ನಾಟಕವು ಹಿಟ್ಲರ್ ಸಾಮ್ರಾಜ್ಯದಂತಾಗಿದ್ದು, ಇದು ಕಿರುಕುಳ ನೀಡಲು ತಂದಿರುವ ಮಸೂದೆಯಾಗಿದೆ’ ಎಂದು ಹೇಳಿದರು.</p>.<p>‘ಮಸೂದೆಯು ದುರುಪಯೋಗವಾಗದು ಎನ್ನುವುದಕ್ಕೆ ಏನು ಗ್ಯಾರೆಂಟಿ ಇದೆ? ಮುಖ್ಯಮಂತ್ರಿಯನ್ನು ಟೀಕಿಸಿದರೂ ಇದರಡಿ ಪ್ರಕರಣ ದಾಖಲಾಗಬಹುದು’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಾಪು, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>