ಆರ್ಥಿಕ ಬಲಾಢ್ಯ ನಾರಿ ಶಕ್ತಿ, ಸಾಂಪ್ರದಾಯಕ ಕುಶಲ ಕರ್ಮಿಗಳ ಕೌಶಲ ಅಭಿವೃದ್ಧಿಗೆ ನೆರವು, ಪ್ರವಾಸ್ಕೋದ್ಯಮ ಕ್ಷೇತ್ರದ ಅಭಿವೃದ್ಧಿ, ಕೃಷಿಗೆ ಉತ್ತೇಜನ, ಶ್ರೀ ಅನ್ನ ಯೋಜನೆ, ವಿಶ್ವಕರ್ಮ ಕೌಶಲ ಸಮ್ಮಾನ್ ಯೋಜನೆ, ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಧ್ಯಮ ವರ್ಗಕ್ಕೆ ಸರ್ವ ಸಹಕಾರ, ಕೌಶಲಾಭಿವೃದ್ಧಿ ಮೂಲಕ ಯುವ ಶಕ್ತಿಗೆ ಉತ್ತೇಜನ, ಹಸಿರು ಹೊದಿಕೆ, ಮೂಲಸೌಕರ್ಯ ವೃದ್ಧಿಗೆ ಒತ್ತು, ಡಿಜಿಟಲ್ ಕ್ರಾಂತಿಗೆ ಬಜೆಟ್ನಲ್ಲಿ ಒತ್ತುನೀಡಲಾಗಿದೆ. ಆದಾಯ ತೆರಿಗೆಯ ಹೊಸ ನಿಯಮದಲ್ಲಿ ₹ 7 ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದರು.