<p><strong>ಉಡುಪಿ:</strong> ‘ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವೈಚಾರಿಕ ಆಕ್ರಮಣ ನಾವು ಎದುರಿಸುತ್ತಿರುವ ಸವಾಲು. ಮುಂದೆ ಬೇರೆ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣಗಳು ನಡೆಯಬಹುದು, ಏಕೆಂದರೆ ಹುಲಿಗೆ ರಕ್ತದ ರುಚಿ ಸಿಕ್ಕಿದೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.</p>.<p>ನಗರದ ಗುಂಡಿಬೈಲ್ನಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡಿದರು.</p>.<p>‘ಈವರೆಗೂ ನಡೆದಿರತಕ್ಕ ಆಕ್ರಮಣಗಳಿಗೆ ಏನು ಶಿಕ್ಷೆ ಆಗಬೇಕೋ ಅದು ಆಗಬೇಕು. ಜೊತೆಗೆ ನಡೆಯುತ್ತಿರುವ ಅಪಪ್ರಚಾರಗಳಿಗೂ ತಕ್ಕನಾದ ಶಿಕ್ಷೆಯಾಗಬೇಕು’ ಎಂದು ಹೇಳಿದರು.</p>.<p>‘ಕುಂಭಮೇಳ ಕುರಿತು ಸಾಕಷ್ಟು ಅಪಪ್ರಚಾರ ನಡೆದವು. ಆದರೆ ದೇಶದಲ್ಲಿ ಗಟ್ಟಿಯಾದ ನಂಬಿಕೆ ಇದೆ. ಅಪ ಪ್ರಚಾರ ಮಾಡಿದಷ್ಟೂ ಅಲ್ಲಿಗೆ ಹೆಚ್ಚು ಜನರು ಹೋಗಿದ್ದಾರೆ’ ಎಂದರು.</p>.<p>‘ದೇಶಕ್ಕೆ, ಸಂಸ್ಕೃತಿಗೆ ಎದುರಾಗುವ ಸವಾಲುಗಳಿಗೆ ನಾವು ತಕ್ಕ ಉತ್ತರವನ್ನು ಕೊಡುತ್ತೇವೆ’ ಎಂದೂ ಹೇಳಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಸುವರ್ಣ, ಸುನಿಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವೈಚಾರಿಕ ಆಕ್ರಮಣ ನಾವು ಎದುರಿಸುತ್ತಿರುವ ಸವಾಲು. ಮುಂದೆ ಬೇರೆ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣಗಳು ನಡೆಯಬಹುದು, ಏಕೆಂದರೆ ಹುಲಿಗೆ ರಕ್ತದ ರುಚಿ ಸಿಕ್ಕಿದೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.</p>.<p>ನಗರದ ಗುಂಡಿಬೈಲ್ನಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡಿದರು.</p>.<p>‘ಈವರೆಗೂ ನಡೆದಿರತಕ್ಕ ಆಕ್ರಮಣಗಳಿಗೆ ಏನು ಶಿಕ್ಷೆ ಆಗಬೇಕೋ ಅದು ಆಗಬೇಕು. ಜೊತೆಗೆ ನಡೆಯುತ್ತಿರುವ ಅಪಪ್ರಚಾರಗಳಿಗೂ ತಕ್ಕನಾದ ಶಿಕ್ಷೆಯಾಗಬೇಕು’ ಎಂದು ಹೇಳಿದರು.</p>.<p>‘ಕುಂಭಮೇಳ ಕುರಿತು ಸಾಕಷ್ಟು ಅಪಪ್ರಚಾರ ನಡೆದವು. ಆದರೆ ದೇಶದಲ್ಲಿ ಗಟ್ಟಿಯಾದ ನಂಬಿಕೆ ಇದೆ. ಅಪ ಪ್ರಚಾರ ಮಾಡಿದಷ್ಟೂ ಅಲ್ಲಿಗೆ ಹೆಚ್ಚು ಜನರು ಹೋಗಿದ್ದಾರೆ’ ಎಂದರು.</p>.<p>‘ದೇಶಕ್ಕೆ, ಸಂಸ್ಕೃತಿಗೆ ಎದುರಾಗುವ ಸವಾಲುಗಳಿಗೆ ನಾವು ತಕ್ಕ ಉತ್ತರವನ್ನು ಕೊಡುತ್ತೇವೆ’ ಎಂದೂ ಹೇಳಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಸುವರ್ಣ, ಸುನಿಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>