‘1975ರ ತುರ್ತು ಪರಿಸ್ಥಿತಿಯ ಕರಾಳ ದಿನಗಳು ಹೋರಾಟದ ರೋಚಕ ನೆನಪುಗಳು’ ಕುರಿತು ಶಾಸಕರ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಲೈವ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೆರವಣಿಗೆ, ಸತ್ಯಾಗ್ರಹದೊಂದಿಗೆ ಲಕ್ಷಾಂತರ ದೇಶಭಕ್ತರ ಬಲಿದಾನದಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ನೆಹರೂ ನಂತರ ಪ್ರಧಾನಿಯಾದ ಇಂದಿರಾ ಗಾಂಧಿ ಕಾಲದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ, ಸ್ವಜನ ಪಕ್ಷಪಾತದ ಆಡಳಿತ ನಡೆದಿದ್ದರಿಂದ ಜನರು ರೊಚ್ಚಿಗೇಳುವಂತಾಯಿತು. ಜಯಪ್ರಕಾಶ್ ಅವರ ನೇತೃತ್ವದಲ್ಲಿ ದೇಶದಾದ್ಯಂತ ಇಂದಿರಾ ಗಾಂಧಿ ವಿರುದ್ಧ ಪ್ರತಿಭಟನೆಗಳು ನಡೆದವು. ಅಂದಿನ ರೈಲ್ವೆ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಕೂಡ ನೀಡಿದ್ದರು. ಇಂದಿರಾ ಗಾಂಧಿ ಅಧಿಕಾರಕ್ಕಾಗಿ ಕಾನೂನನ್ನು ಬಳಸಿ, ಮಧ್ಯರಾತ್ರಿ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದರು. ಅಟಲ್ ಬಿಹಾರಿ ವಾಜಪೇಯಿ, ಆಡ್ವಾಣಿ ಮೊದಲಾದ ನಾಯಕರನ್ನು ರಾತ್ರೋರಾತ್ರಿ ಬಂಧಿಸಲಾಯಿತು’ ಎಂದು ಅಂದಿನ ಘಟನೆಗಳನ್ನು ವಿವರಿಸಿದರು.