<p><strong>ಬ್ರಹ್ಮಾವರ:</strong> ತಾಲ್ಲೂಕಿನ ಆರೂರು ಗ್ರಾಮದಲ್ಲಿ ಕೋಳಿಯೊಂದನ್ನು ಅಟ್ಟಿಸಿಕೊಂಡು ಹೋಗಿ ಬಾವಿಗೆ ಬಿದ್ದಿದ್ದ ಕಪ್ಪು ಚಿರತೆಯನ್ನು ರಕ್ಷಣೆ ಮಾಡಲಾಗಿದೆ.</p>.<p>ಭಾನುವಾರ ರಾತ್ರಿ ಕೋಳಿಯನ್ನು ಅಟ್ಟಿಸಿಕೊಂಡು ಹೋದ ಚಿರತೆ ಗ್ರಾಮದ ಅಡ್ಜೀಲ್ನ ಶಂಕರ ಪೂಜಾರಿ ಅವರ ಆವರಣವಿಲ್ಲದ ಬಾವಿಗೆ ಬಾವಿಗೆ ಬಿದ್ದಿದೆ. ಮನೆಯವರು ಈ ವಿಷಯವನ್ನು ತಕ್ಷಣ ಪಂಚಾಯಿತಿ ಅಧ್ಯಕ್ಷ ಗುರುರಾಜ ರಾವ್ ಅವರಿಗೆ ತಿಳಿಸಿದ್ದು, ಅವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸೋಮವಾರ ಬೆಳಿಗ್ಗೆ ಬಂದ ಅಧಿಕಾರಿಗಳು, ಬಾವಿಯೊಳಗೆ ಪಂಜರವನ್ನು ಇಳಿಸಿ ಚಿರತೆಯನ್ನು ಮೇಲಕ್ಕೆತ್ತಿ, ಕುದುರೆಮುಖ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.</p>.<p>ಪಶ್ಚಿಮ ಘಟ್ಟದ ಕಾಡುಗಳಲ್ಲಿ ಹೆಚ್ಚಾಗಿ ಕಾಣಸಿಗುವ ಕಪ್ಪು ಚಿರತೆ, ಉಡುಪಿ ಜಿಲ್ಲೆಯಲ್ಲಿ ಕಾಣಸಿಗುವುದು ಅಪರೂಪ. ಬಾವಿಗೆ ಬಿದ್ದಿದ್ದ ಗಂಡು ಚಿರತೆ ಸುಮಾರು ಮೂರು ವರ್ಷದ್ದಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನಾಲ್ಕೈದು ತಿಂಗಳುಗಳಿಂದ ಕಪ್ಪು ಚಿರತೆ ಆರೂರು ಗ್ರಾಮದಲ್ಲಿ ಸಂಚರಿಸುತ್ತಿದ್ದು, ಕೆಲವರ ನಾಯಿಗಳನ್ನು ಹೊತ್ತೊಯ್ದಿದಿದೆ. ಇದರಿಂದ ಜನರು ಭಯಭೀತರಾಗಿದ್ದರು. ಚಿರತೆ ಸೆರೆ ಹಿಡಿದ ಮೇಲೆ ನೆಮ್ಮದಿಯಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ಅರಣ್ಯಾಧಿಕಾರಿ ವಾಸೀಂ ಶೇಖ್, ಗಾರ್ಡ್ಗಳಾದ ರಮೇಶ್, ಶ್ರೀನಿವಾಸ, ರಾಮಚಂದ್ರ ಮತ್ತು ಪ್ರವೀಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ತಾಲ್ಲೂಕಿನ ಆರೂರು ಗ್ರಾಮದಲ್ಲಿ ಕೋಳಿಯೊಂದನ್ನು ಅಟ್ಟಿಸಿಕೊಂಡು ಹೋಗಿ ಬಾವಿಗೆ ಬಿದ್ದಿದ್ದ ಕಪ್ಪು ಚಿರತೆಯನ್ನು ರಕ್ಷಣೆ ಮಾಡಲಾಗಿದೆ.</p>.<p>ಭಾನುವಾರ ರಾತ್ರಿ ಕೋಳಿಯನ್ನು ಅಟ್ಟಿಸಿಕೊಂಡು ಹೋದ ಚಿರತೆ ಗ್ರಾಮದ ಅಡ್ಜೀಲ್ನ ಶಂಕರ ಪೂಜಾರಿ ಅವರ ಆವರಣವಿಲ್ಲದ ಬಾವಿಗೆ ಬಾವಿಗೆ ಬಿದ್ದಿದೆ. ಮನೆಯವರು ಈ ವಿಷಯವನ್ನು ತಕ್ಷಣ ಪಂಚಾಯಿತಿ ಅಧ್ಯಕ್ಷ ಗುರುರಾಜ ರಾವ್ ಅವರಿಗೆ ತಿಳಿಸಿದ್ದು, ಅವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸೋಮವಾರ ಬೆಳಿಗ್ಗೆ ಬಂದ ಅಧಿಕಾರಿಗಳು, ಬಾವಿಯೊಳಗೆ ಪಂಜರವನ್ನು ಇಳಿಸಿ ಚಿರತೆಯನ್ನು ಮೇಲಕ್ಕೆತ್ತಿ, ಕುದುರೆಮುಖ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.</p>.<p>ಪಶ್ಚಿಮ ಘಟ್ಟದ ಕಾಡುಗಳಲ್ಲಿ ಹೆಚ್ಚಾಗಿ ಕಾಣಸಿಗುವ ಕಪ್ಪು ಚಿರತೆ, ಉಡುಪಿ ಜಿಲ್ಲೆಯಲ್ಲಿ ಕಾಣಸಿಗುವುದು ಅಪರೂಪ. ಬಾವಿಗೆ ಬಿದ್ದಿದ್ದ ಗಂಡು ಚಿರತೆ ಸುಮಾರು ಮೂರು ವರ್ಷದ್ದಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನಾಲ್ಕೈದು ತಿಂಗಳುಗಳಿಂದ ಕಪ್ಪು ಚಿರತೆ ಆರೂರು ಗ್ರಾಮದಲ್ಲಿ ಸಂಚರಿಸುತ್ತಿದ್ದು, ಕೆಲವರ ನಾಯಿಗಳನ್ನು ಹೊತ್ತೊಯ್ದಿದಿದೆ. ಇದರಿಂದ ಜನರು ಭಯಭೀತರಾಗಿದ್ದರು. ಚಿರತೆ ಸೆರೆ ಹಿಡಿದ ಮೇಲೆ ನೆಮ್ಮದಿಯಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ಅರಣ್ಯಾಧಿಕಾರಿ ವಾಸೀಂ ಶೇಖ್, ಗಾರ್ಡ್ಗಳಾದ ರಮೇಶ್, ಶ್ರೀನಿವಾಸ, ರಾಮಚಂದ್ರ ಮತ್ತು ಪ್ರವೀಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>