<p><strong>ಉಡುಪಿ:</strong> ರಕ್ತದಾನವು ಮಾನವ ಜೀವ ಉಳಿಸುವ ಅತ್ಯಂತ ಶ್ರೇಷ್ಠ ದಾನ. ಇಂತಹ ಕಾರ್ಯಗಳು ಸಮಾಜದಲ್ಲಿ ಮಾನವೀಯತೆ, ಸಹಕಾರ ಮತ್ತು ಬಾಂಧವ್ಯವನ್ನು ವೃದ್ಧಿಸುತ್ತವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ ಹೇಳಿದರು.</p>.<p>ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಉಡುಪಿ ಜಾಮೀಯ ಮಸೀದಿ ವಠಾರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ನಿಂದ ಇಂತಹ ಸಾಮಾಜಿಕ ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುವುದು ಪ್ರಶಂಸನೀಯ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದರು.</p>.<p>ಮಣಿಪಾಲ ಕೆಎಂಸಿ ಬ್ಲಡ್ ಸೆಂಟರ್ನ ಪ್ರೊಫೆಸರ್ ಡಾ.ಶಮೀ ಶಾಸ್ತ್ರಿ ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ವಹಿಸಿದ್ದರು.</p>.<p>ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ಸಾಮಾಜಿಕ ಕಾರ್ಯಕರ್ತ ಮುನೀರ್ ಕಲ್ಮಾಡಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿ.ಎಸ್.ಉಮರ್ ಸ್ವಾಗತಿಸಿದರು. ಸದಸ್ಯರಾದ ರಿಯಾಝ್ ಕುಕ್ಕಿಕಟ್ಟೆ ವಂದಿಸಿದರು. ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ರಕ್ತದಾನವು ಮಾನವ ಜೀವ ಉಳಿಸುವ ಅತ್ಯಂತ ಶ್ರೇಷ್ಠ ದಾನ. ಇಂತಹ ಕಾರ್ಯಗಳು ಸಮಾಜದಲ್ಲಿ ಮಾನವೀಯತೆ, ಸಹಕಾರ ಮತ್ತು ಬಾಂಧವ್ಯವನ್ನು ವೃದ್ಧಿಸುತ್ತವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ ಹೇಳಿದರು.</p>.<p>ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಉಡುಪಿ ಜಾಮೀಯ ಮಸೀದಿ ವಠಾರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ನಿಂದ ಇಂತಹ ಸಾಮಾಜಿಕ ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುವುದು ಪ್ರಶಂಸನೀಯ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದರು.</p>.<p>ಮಣಿಪಾಲ ಕೆಎಂಸಿ ಬ್ಲಡ್ ಸೆಂಟರ್ನ ಪ್ರೊಫೆಸರ್ ಡಾ.ಶಮೀ ಶಾಸ್ತ್ರಿ ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ವಹಿಸಿದ್ದರು.</p>.<p>ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ಸಾಮಾಜಿಕ ಕಾರ್ಯಕರ್ತ ಮುನೀರ್ ಕಲ್ಮಾಡಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿ.ಎಸ್.ಉಮರ್ ಸ್ವಾಗತಿಸಿದರು. ಸದಸ್ಯರಾದ ರಿಯಾಝ್ ಕುಕ್ಕಿಕಟ್ಟೆ ವಂದಿಸಿದರು. ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>