ಓಂಕಾರ್ ಪ್ರಸನ್ನ ಎಂಬ ಹೆಸರಿನ ದೋಣಿಯಲ್ಲಿ ಹೊಸಾಡು ಗ್ರಾಮದ ಕಂಚುಗೋಡಿನ ನಿವಾಸಿಗಳಾದ ರಾಮ ಖಾರ್ವಿ, ವಿನಯ ಖಾರ್ವಿ, ನಾಗರಾಜ ಖಾರ್ವಿ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬಂದ ಭಾರಿ ಗಾಳಿ ಮಳೆ ಮತ್ತು ಅಲೆಗಳ ಹೊಡೆತಕ್ಕೆ ದೋಣಿ ಮಗುಚಿದೆ. ಸಮೀಪದಲ್ಲಿ ಮಹಾಲಕ್ಷ್ಮೀ ಎಂಬ ಹೆಸರಿನ ದೋಣಿಯಲ್ಲಿ ಮೀನುಗಾರಿಕೆ ನಿರತರಾಗಿದ್ದ ವಿಘ್ನೇಶ ಖಾರ್ವಿ, ಪ್ರಮೋದ್ ಖಾರ್ವಿ, ದೇವದಾಸ್ ಖಾರ್ವಿ, ಶಿವರಾಜ್ ಖಾರ್ವಿ, ಅಂಬರೀಶ್ ಖಾರ್ವಿ ಮುಳುಗುತ್ತಿದ್ದ ದೋಣಿಯತ್ತ ಧಾವಿಸಿ ಬಂದು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ದೋಣಿ, ಬಲೆ, ಎಂಜಿನ್, ಇತರ ಸಲಕರಣೆಗಳು ಮುಳುಗಿದ್ದು, ₹ 4.5 ಲಕ್ಷ ನಷ್ಟ ಸಂಭವಿಸಿದೆ.