ಸುವರ್ಣ ತ್ರಿಭುಜ ಬೋಟು ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಜ್ಞರಿಂದ ಕೂಲಂಕಷ ವರದಿ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಲಾಗುವುದು. ನೌಕಪಡೆಯವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು, ಬೋಟಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಇಲಾಖೆಗೆ ನೀಡಿದ್ದಾರೆ. ಬೋಟು ಯಾವ ವೇಗದಲ್ಲಿ ಚಲಿಸಿರಬಹುದು, ಅವಘಡ ಸಂಭವಿಸಲು ಕಾರಣ ಏನು, ಬೋಟಿನಲ್ಲಿದ್ದವರು ಎಲ್ಲಿ ಹೋದರು ಎಂಬುದರ ಬಗ್ಗೆ ತಜ್ಞರಿಂದ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.