<p><strong>ಬೈಂದೂರು (ಉಡುಪಿ): </strong>ತಾಲ್ಲೂಕಿನ ಪಡುವರಿ ಗ್ರಾಮದ ತಾರಾಪತಿಯಲ್ಲಿ ಶುಕ್ರವಾರ ನಾಡದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಶವ ಶನಿವಾರ ಪತ್ತೆಯಾಗಿದೆ.</p>.<p>‘ಜೈ ಗುರೂಜಿ’ ದೋಣಿ ಮಾಲೀಕ ಚರಣ್ರಾಜ್ ಖಾರ್ವಿ (25)ಅವರಶವ ಅಮ್ಮನವರ ತೊಪ್ಲು ಬಳಿ ಹಾಗೂ ಅಣ್ಣಪ್ಪ ಖಾರ್ವಿ (40)ಅವರ ಶವ ಕರ್ಕಿಕಳಿ ಬಳಿ ಸಿಕ್ಕಿದೆ.</p>.<p>ಶುಕ್ರವಾರ ಮೀನುಗಾರಿಕೆ ಮುಗಿಸಿ ಅಳ್ವೆಕೋಡಿಗೆ ಬರುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ದೋಣಿ ಮಗುಚಿತ್ತು. ಅದರಲ್ಲಿದ್ದ 7 ಮೀನುಗಾರರ ಪೈಕಿ ಇಬ್ಬರು ನಾಪತ್ತೆಯಾಗಿದ್ದರು. ವಿಜೇತ್, ಪ್ರವೀಣ್, ಸಚಿನ್, ಸುಮಂತ್, ವಾಸುದೇವ ಖಾರ್ವಿ ಅವರನ್ನು ಕರಾವಳಿ ಕಾವಲು ಪಡೆಯ ಪೋಲಿಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದರು.</p>.<p><strong>ಶಾಸಕರ ಭೇಟಿ: </strong>ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸ್ಥಳಕ್ಕೆ ಭೇಟಿನೀಡಿ, ಮೃತ ಮೀನುಗಾರರ ಕುಟುಂಬಕ್ಕೆ ಸರ್ಕಾರದಿಂದ ₹ 6 ಲಕ್ಷ ಪರಿಹಾರದ ಜತೆಗೆ ವೈಯಕ್ತಿಕ ಪರಿಹಾರ ನೀಡುವುದಾಗಿ ತಿಳಿಸಿ, ಇಂತಹ ದುರ್ಘಟನೆಗಳು ಮರುಕಳಿಸದಿರಲು ಮೀನುಗಾರರಿಗೆ ಲೈಫ್ ಜಾಕೆಟ್ ಒದಗಿಸುವ ಭರವಸೆ ನೀಡಿದರು.</p>.<p>ಮತ್ತೊಂದೆಡೆ, ಗಂಗೊಳ್ಳಿಯಲ್ಲಿ ಶುಕ್ರವಾರ ಪಾತಿದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ದೋಣಿ ಮಗುಚಿ ನಾಪತ್ತೆಯಾಗಿದ್ದ ದೇವೇಂದ್ರ ಖಾರ್ವಿ (35) ಅವರ ಶವ ಶನಿವಾರ ಇಲ್ಲಿನ ಪಂಚಗಂಗಾವಳಿ ನದಿ ತೀರದ ಕಳವಿನ ಬಾಗಿಲು ಬಳಿ ದೊರೆತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಂದೂರು (ಉಡುಪಿ): </strong>ತಾಲ್ಲೂಕಿನ ಪಡುವರಿ ಗ್ರಾಮದ ತಾರಾಪತಿಯಲ್ಲಿ ಶುಕ್ರವಾರ ನಾಡದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಶವ ಶನಿವಾರ ಪತ್ತೆಯಾಗಿದೆ.</p>.<p>‘ಜೈ ಗುರೂಜಿ’ ದೋಣಿ ಮಾಲೀಕ ಚರಣ್ರಾಜ್ ಖಾರ್ವಿ (25)ಅವರಶವ ಅಮ್ಮನವರ ತೊಪ್ಲು ಬಳಿ ಹಾಗೂ ಅಣ್ಣಪ್ಪ ಖಾರ್ವಿ (40)ಅವರ ಶವ ಕರ್ಕಿಕಳಿ ಬಳಿ ಸಿಕ್ಕಿದೆ.</p>.<p>ಶುಕ್ರವಾರ ಮೀನುಗಾರಿಕೆ ಮುಗಿಸಿ ಅಳ್ವೆಕೋಡಿಗೆ ಬರುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ದೋಣಿ ಮಗುಚಿತ್ತು. ಅದರಲ್ಲಿದ್ದ 7 ಮೀನುಗಾರರ ಪೈಕಿ ಇಬ್ಬರು ನಾಪತ್ತೆಯಾಗಿದ್ದರು. ವಿಜೇತ್, ಪ್ರವೀಣ್, ಸಚಿನ್, ಸುಮಂತ್, ವಾಸುದೇವ ಖಾರ್ವಿ ಅವರನ್ನು ಕರಾವಳಿ ಕಾವಲು ಪಡೆಯ ಪೋಲಿಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದರು.</p>.<p><strong>ಶಾಸಕರ ಭೇಟಿ: </strong>ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸ್ಥಳಕ್ಕೆ ಭೇಟಿನೀಡಿ, ಮೃತ ಮೀನುಗಾರರ ಕುಟುಂಬಕ್ಕೆ ಸರ್ಕಾರದಿಂದ ₹ 6 ಲಕ್ಷ ಪರಿಹಾರದ ಜತೆಗೆ ವೈಯಕ್ತಿಕ ಪರಿಹಾರ ನೀಡುವುದಾಗಿ ತಿಳಿಸಿ, ಇಂತಹ ದುರ್ಘಟನೆಗಳು ಮರುಕಳಿಸದಿರಲು ಮೀನುಗಾರರಿಗೆ ಲೈಫ್ ಜಾಕೆಟ್ ಒದಗಿಸುವ ಭರವಸೆ ನೀಡಿದರು.</p>.<p>ಮತ್ತೊಂದೆಡೆ, ಗಂಗೊಳ್ಳಿಯಲ್ಲಿ ಶುಕ್ರವಾರ ಪಾತಿದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ದೋಣಿ ಮಗುಚಿ ನಾಪತ್ತೆಯಾಗಿದ್ದ ದೇವೇಂದ್ರ ಖಾರ್ವಿ (35) ಅವರ ಶವ ಶನಿವಾರ ಇಲ್ಲಿನ ಪಂಚಗಂಗಾವಳಿ ನದಿ ತೀರದ ಕಳವಿನ ಬಾಗಿಲು ಬಳಿ ದೊರೆತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>