<p><strong>ಉಡುಪಿ</strong>: ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲಾ ಸ್ಮಾರಕ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಸಮಸ್ಯೆಗಳಿಗೆ ಹಿಂದಿನ ಸರ್ಕಾರ ಕಾರಣ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆ ನಿರ್ಮಾಣ ಸಂಬಂಧ ಕಾಂಗ್ರೆಸ್ ಅವಧಿಯಲ್ಲಿ ಉದ್ಯಮಿ ಬಿ.ಆರ್.ಶೆಟ್ಟಿ ಹಾಗೂ ಅಂದಿನ ಸರ್ಕಾರದ ಮಧ್ಯೆ ಕೇವಲ ಒಂದು ವರ್ಷದ ಒಪ್ಪಂದ ನಡೆದಿದೆ. ಖಾಯಂ ಒಪ್ಪಂದವಾಗಿಲ್ಲ. ಈ ಬಗ್ಗೆ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಿದ್ದರೂ ಗಣನೆಗೆ ತೆಗೆದುಕೊಳ್ಳಲಿಲ್ಲ ಎಂದರು.</p>.<p>ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲ ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆ ನಿರ್ಮಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲು ಸರ್ಕಾರ ಬಿ.ಆರ್.ಶೆಟ್ಟಿ ಅವರಿಗೆ ಸರ್ಕಾರ ಅನುಮತಿ ನೀಡಿದೆ. ನಿಯಮಗಳ ಪ್ರಕಾರ 2 ತಳ ಅಂತಸ್ತು ಮಾತ್ರ ನಿರ್ಮಾಣಕ್ಕೆ ಅನುಮತಿ ಇದೆ. ಆದರೆ, ಮೂರು ತಳ ಅಂತಸ್ತು ಕಟ್ಟಲು ಹೊರಟಿದ್ದಕ್ಕೆ ಕಾಮಗಾರಿಗೆ ತಡೆಯಾಜ್ಞೆ ಬಿದ್ದಿದೆ. ಈ ವಿಚಾರ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ತಿಳಿದಿದೆಯೇ ಎಂದು ಪ್ರಶ್ನಿಸಿದ ಶಾಸಕರು, ಕಾನೂನು ಬಾಹಿರ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದರು.</p>.<p>ಶಾಸಕ ರಘುಪತಿ ಭಟ್ ಅವರ ಹೇಳಿಕೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದು, ‘ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ನಿರಂತರವಾಗಿರಬೇಕು, ಉತ್ತಮ ಆರೋಗ್ಯ ಸೇವೆ ಜಿಲ್ಲೆಯ ಜನರಿಗೆ ಸಿಗಬೇಕು ಎಂಬುದಷ್ಟೆ ನನ್ನ ಉದ್ದೇಶ’ ಎಂದಿದ್ದಾರೆ.</p>.<p>ಹಳೆಯ 50 ಬೆಡ್ಗಳ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮಳೆಗಾಲದಲ್ಲಿ ಸೋರುತ್ತಿದ್ದರಿಂದ ನಬಾರ್ಡ್ ಮೂಲಕ ₹ 10 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟಲು ಹಿಂದೆ ಪ್ರಯತ್ನಿಸಲಾಗಿತ್ತು. ಆದರೆ, ನಬಾರ್ಡ್ ಅನುದಾನವನ್ನು ನಗರ ಪ್ರದೇಶದಲ್ಲಿ ಬಳಸಿಕೊಳ್ಳಲು ಅವಕಾಶವಿಲ್ಲದ ಕಾರಣ ಬ್ರಹ್ಮಾವರ ಸಮುದಾಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲಾಗಿತ್ತು ಎಂದು ಮಧ್ವರಾಜ್ ತಿಳಿಸಿದ್ದಾರೆ.</p>.<p>ತಾಯಿ ಹಾಗೂ ಮಕ್ಕಳ ಆಸ್ಪತ್ರೆಯನ್ನು ಯಾರು ಬೇಕಿದ್ದರೂ ನಡೆಸಲಿ. ಸಾರ್ವಜನಿಕರಿಗೆ ಸಿಗುತ್ತಿರುವ ಸೇವೆ ನಿಲ್ಲಬಾರದು. ಆಸ್ಪತ್ರೆಯ ಸಿಬ್ಬಂದಿಗೆ ವೇತನ ಹಾಗೂ ಸೇವಾ ಭದ್ರತೆ ಸಿಗಬೇಕು ಎಂದು ಪ್ರಮೋದ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲಾ ಸ್ಮಾರಕ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಸಮಸ್ಯೆಗಳಿಗೆ ಹಿಂದಿನ ಸರ್ಕಾರ ಕಾರಣ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆ ನಿರ್ಮಾಣ ಸಂಬಂಧ ಕಾಂಗ್ರೆಸ್ ಅವಧಿಯಲ್ಲಿ ಉದ್ಯಮಿ ಬಿ.ಆರ್.ಶೆಟ್ಟಿ ಹಾಗೂ ಅಂದಿನ ಸರ್ಕಾರದ ಮಧ್ಯೆ ಕೇವಲ ಒಂದು ವರ್ಷದ ಒಪ್ಪಂದ ನಡೆದಿದೆ. ಖಾಯಂ ಒಪ್ಪಂದವಾಗಿಲ್ಲ. ಈ ಬಗ್ಗೆ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಿದ್ದರೂ ಗಣನೆಗೆ ತೆಗೆದುಕೊಳ್ಳಲಿಲ್ಲ ಎಂದರು.</p>.<p>ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲ ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆ ನಿರ್ಮಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲು ಸರ್ಕಾರ ಬಿ.ಆರ್.ಶೆಟ್ಟಿ ಅವರಿಗೆ ಸರ್ಕಾರ ಅನುಮತಿ ನೀಡಿದೆ. ನಿಯಮಗಳ ಪ್ರಕಾರ 2 ತಳ ಅಂತಸ್ತು ಮಾತ್ರ ನಿರ್ಮಾಣಕ್ಕೆ ಅನುಮತಿ ಇದೆ. ಆದರೆ, ಮೂರು ತಳ ಅಂತಸ್ತು ಕಟ್ಟಲು ಹೊರಟಿದ್ದಕ್ಕೆ ಕಾಮಗಾರಿಗೆ ತಡೆಯಾಜ್ಞೆ ಬಿದ್ದಿದೆ. ಈ ವಿಚಾರ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ತಿಳಿದಿದೆಯೇ ಎಂದು ಪ್ರಶ್ನಿಸಿದ ಶಾಸಕರು, ಕಾನೂನು ಬಾಹಿರ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದರು.</p>.<p>ಶಾಸಕ ರಘುಪತಿ ಭಟ್ ಅವರ ಹೇಳಿಕೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದು, ‘ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ನಿರಂತರವಾಗಿರಬೇಕು, ಉತ್ತಮ ಆರೋಗ್ಯ ಸೇವೆ ಜಿಲ್ಲೆಯ ಜನರಿಗೆ ಸಿಗಬೇಕು ಎಂಬುದಷ್ಟೆ ನನ್ನ ಉದ್ದೇಶ’ ಎಂದಿದ್ದಾರೆ.</p>.<p>ಹಳೆಯ 50 ಬೆಡ್ಗಳ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮಳೆಗಾಲದಲ್ಲಿ ಸೋರುತ್ತಿದ್ದರಿಂದ ನಬಾರ್ಡ್ ಮೂಲಕ ₹ 10 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟಲು ಹಿಂದೆ ಪ್ರಯತ್ನಿಸಲಾಗಿತ್ತು. ಆದರೆ, ನಬಾರ್ಡ್ ಅನುದಾನವನ್ನು ನಗರ ಪ್ರದೇಶದಲ್ಲಿ ಬಳಸಿಕೊಳ್ಳಲು ಅವಕಾಶವಿಲ್ಲದ ಕಾರಣ ಬ್ರಹ್ಮಾವರ ಸಮುದಾಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲಾಗಿತ್ತು ಎಂದು ಮಧ್ವರಾಜ್ ತಿಳಿಸಿದ್ದಾರೆ.</p>.<p>ತಾಯಿ ಹಾಗೂ ಮಕ್ಕಳ ಆಸ್ಪತ್ರೆಯನ್ನು ಯಾರು ಬೇಕಿದ್ದರೂ ನಡೆಸಲಿ. ಸಾರ್ವಜನಿಕರಿಗೆ ಸಿಗುತ್ತಿರುವ ಸೇವೆ ನಿಲ್ಲಬಾರದು. ಆಸ್ಪತ್ರೆಯ ಸಿಬ್ಬಂದಿಗೆ ವೇತನ ಹಾಗೂ ಸೇವಾ ಭದ್ರತೆ ಸಿಗಬೇಕು ಎಂದು ಪ್ರಮೋದ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>