<p><strong>ಬ್ರಹ್ಮಾವರ:</strong> ಸಮಾಜದ ಮೂರು ಪ್ರಮುಖ ಅಂಗಗಳು ಜನರಲ್ಲಿ ನಂಬಿಕೆ ಕಳೆದುಕೊಂಡಿವೆ. ಸಮಾಜವನ್ನು ತಿದ್ದುವಲ್ಲಿ ಹಾಗೂ ಪರಿವರ್ತನೆ ಮಾಡುವಲ್ಲಿ ಪತ್ರಿಕಾ ರಂಗದ ಬಗ್ಗೆ ಹೆಚ್ಚು ನಂಬಿಕೆ ಇದೆ. ಮಾಧ್ಯಮಗಳು ಈ ನಂಬಿಕೆಯನ್ನು ಉಳಿಸಿಕೊಳ್ಳುವ ಕಾರ್ಯ ಮಾಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.</p>.<p>ಬ್ರಹ್ಮಾವರ ಪತ್ರಕರ್ತರ ಸಂಘ ಆಶ್ರಯದಲ್ಲಿ ಜ.4ರಂದು ನಡೆಯಲಿರುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಬ್ರಹ್ಮಾವರದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕಾರಂಗದಲ್ಲಿ ತಮ್ಮದೇ ಆದ ಮೌಲ್ಯವನ್ನು ಉಳಿಸಿಕೊಂಡವರು ಹಾಗೂ ಜೀವನದ ಕೊನೆತನಕ ಆ ಮೌಲ್ಯಗಳಿಗಾಗಿ ಹೋರಾಡಿದವರು. ಪತ್ರಕರ್ತರು ಎಷ್ಟೇ ಕಷ್ಟವಾದರು ಮೌಲ್ಯಗಳನ್ನು ಉಳಿಸಿಕೊಳ್ಳಬೇಕು. ವಡ್ಡರ್ಸೆ ಅವರನ್ನು ನೆನಪಿನಲ್ಲಿಡುವ ಸಲುವಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು.<br /> ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಬ್ರಹ್ಮಾವರ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ಪದಾಧಿಕಾರಿಗಳಾದ ಚಂದ್ರಶೇಖರ ಬೀಜಾಡಿ, ಮೋಹನ ಉಡುಪ, ಪ್ರವೀಣ ಮುದ್ದೂರು, ನಾಗರಾಜ ಅಲ್ತಾರು, ಗಣೇಶ ಸಾಹೇಬರಕಟ್ಟೆ ಇದ್ದರು.</p>
<p><strong>ಬ್ರಹ್ಮಾವರ:</strong> ಸಮಾಜದ ಮೂರು ಪ್ರಮುಖ ಅಂಗಗಳು ಜನರಲ್ಲಿ ನಂಬಿಕೆ ಕಳೆದುಕೊಂಡಿವೆ. ಸಮಾಜವನ್ನು ತಿದ್ದುವಲ್ಲಿ ಹಾಗೂ ಪರಿವರ್ತನೆ ಮಾಡುವಲ್ಲಿ ಪತ್ರಿಕಾ ರಂಗದ ಬಗ್ಗೆ ಹೆಚ್ಚು ನಂಬಿಕೆ ಇದೆ. ಮಾಧ್ಯಮಗಳು ಈ ನಂಬಿಕೆಯನ್ನು ಉಳಿಸಿಕೊಳ್ಳುವ ಕಾರ್ಯ ಮಾಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.</p>.<p>ಬ್ರಹ್ಮಾವರ ಪತ್ರಕರ್ತರ ಸಂಘ ಆಶ್ರಯದಲ್ಲಿ ಜ.4ರಂದು ನಡೆಯಲಿರುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಬ್ರಹ್ಮಾವರದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕಾರಂಗದಲ್ಲಿ ತಮ್ಮದೇ ಆದ ಮೌಲ್ಯವನ್ನು ಉಳಿಸಿಕೊಂಡವರು ಹಾಗೂ ಜೀವನದ ಕೊನೆತನಕ ಆ ಮೌಲ್ಯಗಳಿಗಾಗಿ ಹೋರಾಡಿದವರು. ಪತ್ರಕರ್ತರು ಎಷ್ಟೇ ಕಷ್ಟವಾದರು ಮೌಲ್ಯಗಳನ್ನು ಉಳಿಸಿಕೊಳ್ಳಬೇಕು. ವಡ್ಡರ್ಸೆ ಅವರನ್ನು ನೆನಪಿನಲ್ಲಿಡುವ ಸಲುವಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು.<br /> ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಬ್ರಹ್ಮಾವರ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ಪದಾಧಿಕಾರಿಗಳಾದ ಚಂದ್ರಶೇಖರ ಬೀಜಾಡಿ, ಮೋಹನ ಉಡುಪ, ಪ್ರವೀಣ ಮುದ್ದೂರು, ನಾಗರಾಜ ಅಲ್ತಾರು, ಗಣೇಶ ಸಾಹೇಬರಕಟ್ಟೆ ಇದ್ದರು.</p>