<p>ಬ್ರಹ್ಮಾವರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ, ಕೇರಳದ ವತಿಯಿಂದ ಬ್ರಹ್ಮಾವರ ತಾಲ್ಲೂಕಿನ ಕೊರಗ ಸಮುದಾಯದವರಿಂದ ‘ನಮ್ಮ ಭೂಮಿ ನಮ್ಮ ಹಕ್ಕು’ ಧ್ಯೇಯದೊಂದಿಗೆ ಕೃಷಿ ಭೂಮಿಗಾಗಿ ಹಕ್ಕೊತ್ತಾಯ ಮಂಗಳವಾರ ಬ್ರಹ್ಮಾವರ ನಗರದಲ್ಲಿ ನಡೆಯಿತು.</p>.<p>ಕೊರಗ ಮುಖಂಡ ಬೊಗ್ರ ಕೊರಗ ಮಾತನಾಡಿ, ‘ಹಿಂದಿನ ಸರ್ಕಾರ ಅರಣ್ಯ ಭೂಮಿಯನ್ನು ಮುಕ್ತಗೊಳಿಸಿತ್ತು ಮತ್ತು ಕಂದಾಯ ಸಚಿವರಾಗಿದ್ದ ಆರ್.ಅಶೋಕ್ ಅವರು ಗ್ರಾಮ ವಾಸ್ತವ್ಯದಲ್ಲಿ ಜಿಲ್ಲೆಯಲ್ಲಿ ಪ್ರತಿ ಕೊರಗ ಕುಟುಂಬಕ್ಕೆ ಕೃಷಿಗಾಗಿ 1 ಎಕರೆ ಭೂಮಿ ನೀಡುವುದಾಗಿ ಹೇಳಿದ್ದರು. ಆ ಪ್ರಯುಕ್ತ ಕೊರಗ ಸಮುದಾಯ ಭೂ ರಹಿತರನ್ನು ಗುರುತಿಸಿ 123 ಅರ್ಜಿಯನ್ನು ದರ್ಖಾಸ್ತು ನಮೂನೆಯಲ್ಲಿ ಸಲ್ಲಿಸಲಾಗಿತ್ತು. ಆದರೆ ಈ ತನಕ ಯಾವುದೇ ಪ್ರಗತಿ ಕಂಡಿಲ್ಲ. ಸರ್ಕಾರ ನಮಗೆ ಭೂಮಿ ನೀಡಬೇಕು’ ಎಂದರು.</p>.<p>ಇದಕ್ಕೂ ಮುನ್ನ ಜಾಥಾ ಮೂಲಕ ಸಾಗಿ ಬ್ರಹ್ಮಾವರದ ಉಪ ತಹಶೀಲ್ದಾರ್ ರಾಘವೇಂದ್ರ ಅವರಿಗೆ ಒಕ್ಕೂಟದಿಂದ ಮನವಿ ನೀಡಲಾಯಿತು. ಕೊರಗ ಸಂಘಟನೆಯ ಪ್ರಮುಖರಾದ ದಿವಾಕರ ಕಳ್ತೂರು, ಬೇಬಿ ಕೋಟ, ಮಾಲತಿ ಬ್ರಹ್ಮಾವರ, ಅಣ್ಣಿ ಸೂರಾಲು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ, ಕೇರಳದ ವತಿಯಿಂದ ಬ್ರಹ್ಮಾವರ ತಾಲ್ಲೂಕಿನ ಕೊರಗ ಸಮುದಾಯದವರಿಂದ ‘ನಮ್ಮ ಭೂಮಿ ನಮ್ಮ ಹಕ್ಕು’ ಧ್ಯೇಯದೊಂದಿಗೆ ಕೃಷಿ ಭೂಮಿಗಾಗಿ ಹಕ್ಕೊತ್ತಾಯ ಮಂಗಳವಾರ ಬ್ರಹ್ಮಾವರ ನಗರದಲ್ಲಿ ನಡೆಯಿತು.</p>.<p>ಕೊರಗ ಮುಖಂಡ ಬೊಗ್ರ ಕೊರಗ ಮಾತನಾಡಿ, ‘ಹಿಂದಿನ ಸರ್ಕಾರ ಅರಣ್ಯ ಭೂಮಿಯನ್ನು ಮುಕ್ತಗೊಳಿಸಿತ್ತು ಮತ್ತು ಕಂದಾಯ ಸಚಿವರಾಗಿದ್ದ ಆರ್.ಅಶೋಕ್ ಅವರು ಗ್ರಾಮ ವಾಸ್ತವ್ಯದಲ್ಲಿ ಜಿಲ್ಲೆಯಲ್ಲಿ ಪ್ರತಿ ಕೊರಗ ಕುಟುಂಬಕ್ಕೆ ಕೃಷಿಗಾಗಿ 1 ಎಕರೆ ಭೂಮಿ ನೀಡುವುದಾಗಿ ಹೇಳಿದ್ದರು. ಆ ಪ್ರಯುಕ್ತ ಕೊರಗ ಸಮುದಾಯ ಭೂ ರಹಿತರನ್ನು ಗುರುತಿಸಿ 123 ಅರ್ಜಿಯನ್ನು ದರ್ಖಾಸ್ತು ನಮೂನೆಯಲ್ಲಿ ಸಲ್ಲಿಸಲಾಗಿತ್ತು. ಆದರೆ ಈ ತನಕ ಯಾವುದೇ ಪ್ರಗತಿ ಕಂಡಿಲ್ಲ. ಸರ್ಕಾರ ನಮಗೆ ಭೂಮಿ ನೀಡಬೇಕು’ ಎಂದರು.</p>.<p>ಇದಕ್ಕೂ ಮುನ್ನ ಜಾಥಾ ಮೂಲಕ ಸಾಗಿ ಬ್ರಹ್ಮಾವರದ ಉಪ ತಹಶೀಲ್ದಾರ್ ರಾಘವೇಂದ್ರ ಅವರಿಗೆ ಒಕ್ಕೂಟದಿಂದ ಮನವಿ ನೀಡಲಾಯಿತು. ಕೊರಗ ಸಂಘಟನೆಯ ಪ್ರಮುಖರಾದ ದಿವಾಕರ ಕಳ್ತೂರು, ಬೇಬಿ ಕೋಟ, ಮಾಲತಿ ಬ್ರಹ್ಮಾವರ, ಅಣ್ಣಿ ಸೂರಾಲು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>