<p><strong>ಕೋಟ</strong>(ಬ್ರಹ್ಮಾವರ): ಅಕಾಲಿಕ ಮಳೆಯಿಂದ ಕೋಟ ಹೋಬಳಿ ಭಾಗದ ಕಲ್ಲಂಗಡಿ ಬೆಳೆ ಸಂಪೂರ್ಣ ಹಾನಿಗೊಂಡಿರುವ ಪ್ರದೇಶಗಳಿಗೆ, ಕುಂದಾಪುರ ಎ.ಸಿ ರಶ್ಮಿ ಮಂಗಳವಾರ ಭೇಟಿ ನೀಡಿ, ರೈತ ಸಮುದಾಯಕ್ಕೆ ಸಾಂತ್ವನ ಹೇಳಿದರು.</p>.<p>ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಎಸ್ ಹೆಗ್ಡೆ ಸಹಿತ ಅಧಿಕಾರಿಗಳ ತಂಡ ಕಲ್ಲಂಗಡಿ ಬೆಳೆದ ಗದ್ದೆಗಿಳಿದು, ಕೋಟದ ಹರ್ತಟ್ಟಿನ ಕೃಷಿಕ ಸಿದ್ಧ ದೇವಾಡಿಗ ಅವರಿಂದ ಮಾಹಿತಿ ಪಡೆದರು.</p>.<p>ಈ ಸಂದರ್ಭ ಮಾತನಾಡಿದ ಅವರು, ಹಾನಿಗೊಂಡ ಬಗ್ಗೆ ಸಂಬಂಧಿಸಿದ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಮಾಹಿತಿ ಕಲೆಹಾಕಲು ಸೂಚಿಸಿದ್ದೇನೆ. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುತ್ತಾರೆ ಎಂದರು.</p>.<p>ಕೋಟ ಕಂದಾಯ ಅಧಿಕಾರಿ ಮಂಜು ಬಿಲ್ಲವ ಹಾಗೂ ಗ್ರಾಮ ಲೆಕ್ಕಿಗ ಚಲುವರಾಜು, ತಾಲ್ಲೂಕು ಜನಾಧಿಕಾರಿ ಸಂದೇಶ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟ</strong>(ಬ್ರಹ್ಮಾವರ): ಅಕಾಲಿಕ ಮಳೆಯಿಂದ ಕೋಟ ಹೋಬಳಿ ಭಾಗದ ಕಲ್ಲಂಗಡಿ ಬೆಳೆ ಸಂಪೂರ್ಣ ಹಾನಿಗೊಂಡಿರುವ ಪ್ರದೇಶಗಳಿಗೆ, ಕುಂದಾಪುರ ಎ.ಸಿ ರಶ್ಮಿ ಮಂಗಳವಾರ ಭೇಟಿ ನೀಡಿ, ರೈತ ಸಮುದಾಯಕ್ಕೆ ಸಾಂತ್ವನ ಹೇಳಿದರು.</p>.<p>ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಎಸ್ ಹೆಗ್ಡೆ ಸಹಿತ ಅಧಿಕಾರಿಗಳ ತಂಡ ಕಲ್ಲಂಗಡಿ ಬೆಳೆದ ಗದ್ದೆಗಿಳಿದು, ಕೋಟದ ಹರ್ತಟ್ಟಿನ ಕೃಷಿಕ ಸಿದ್ಧ ದೇವಾಡಿಗ ಅವರಿಂದ ಮಾಹಿತಿ ಪಡೆದರು.</p>.<p>ಈ ಸಂದರ್ಭ ಮಾತನಾಡಿದ ಅವರು, ಹಾನಿಗೊಂಡ ಬಗ್ಗೆ ಸಂಬಂಧಿಸಿದ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಮಾಹಿತಿ ಕಲೆಹಾಕಲು ಸೂಚಿಸಿದ್ದೇನೆ. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುತ್ತಾರೆ ಎಂದರು.</p>.<p>ಕೋಟ ಕಂದಾಯ ಅಧಿಕಾರಿ ಮಂಜು ಬಿಲ್ಲವ ಹಾಗೂ ಗ್ರಾಮ ಲೆಕ್ಕಿಗ ಚಲುವರಾಜು, ತಾಲ್ಲೂಕು ಜನಾಧಿಕಾರಿ ಸಂದೇಶ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>