<p>ಬ್ರಹ್ಮಾವರ: ಬೆಂಗಳೂರಿನಲ್ಲಿ ಲೇಬರ್ ಕಾಂಟ್ರಾಕ್ಟ್ ಸಂಸ್ಥೆ ನಡೆಸುತ್ತಿದ್ದ ಉದ್ಯಮಿ ನರಸಿಂಹ ಎಚ್.ಎಸ್. (66) ಎಂಬುವವರು ಬ್ರಹ್ಮಾವರದ ಲಾಡ್ಜ್ವೊಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ವ್ಯವಹಾರದಲ್ಲಿ ಉಂಟಾದ ಆರ್ಥಿಕ ನಷ್ಟದಿಂದಾಗಿ ಹಲವರಿಂದ ಸಾಲ ಪಡೆದಿದ್ದ ಅವರು, ಕಳೆದ ಎರಡು ತಿಂಗಳಿನಿಂದ ಬಡ್ಡಿ ಪಾವತಿಸಲು ಸಾಧ್ಯವಾಗದೆ ಸಾಲಗಾರರ ಕಿರುಕುಳದಿಂದ ಮನನೊಂದಿದ್ದರು ಎನ್ನಲಾಗಿದೆ. ಏ.12ರಂದು ಬ್ರಹ್ಮಾವರದ ಆಶ್ರಯ ಲಾಡ್ಜ್ಗೆ ಅವರು ಬಂದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಮೃತರ ಪುತ್ರ ನೀಡಿದ ದೂರಿನಂತೆ ಕುಮಾರ್ ಕೆ.ಜೆ., ನರಸಿಂಹಣ್ಣ ಸೇರಿದಂತೆ ಐವರ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-28-1985920134</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ಬೆಂಗಳೂರಿನಲ್ಲಿ ಲೇಬರ್ ಕಾಂಟ್ರಾಕ್ಟ್ ಸಂಸ್ಥೆ ನಡೆಸುತ್ತಿದ್ದ ಉದ್ಯಮಿ ನರಸಿಂಹ ಎಚ್.ಎಸ್. (66) ಎಂಬುವವರು ಬ್ರಹ್ಮಾವರದ ಲಾಡ್ಜ್ವೊಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ವ್ಯವಹಾರದಲ್ಲಿ ಉಂಟಾದ ಆರ್ಥಿಕ ನಷ್ಟದಿಂದಾಗಿ ಹಲವರಿಂದ ಸಾಲ ಪಡೆದಿದ್ದ ಅವರು, ಕಳೆದ ಎರಡು ತಿಂಗಳಿನಿಂದ ಬಡ್ಡಿ ಪಾವತಿಸಲು ಸಾಧ್ಯವಾಗದೆ ಸಾಲಗಾರರ ಕಿರುಕುಳದಿಂದ ಮನನೊಂದಿದ್ದರು ಎನ್ನಲಾಗಿದೆ. ಏ.12ರಂದು ಬ್ರಹ್ಮಾವರದ ಆಶ್ರಯ ಲಾಡ್ಜ್ಗೆ ಅವರು ಬಂದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಮೃತರ ಪುತ್ರ ನೀಡಿದ ದೂರಿನಂತೆ ಕುಮಾರ್ ಕೆ.ಜೆ., ನರಸಿಂಹಣ್ಣ ಸೇರಿದಂತೆ ಐವರ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-28-1985920134</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>