<p><strong>ಬ್ರಹ್ಮಾವರ</strong>: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ ಬುಧವಾರ ಸಂಭವಿಸಿದೆ.</p><p>ಅಚ್ಲಾಡಿ ಅಂಬೇಡ್ಕರ್ ಕಾಲನಿ ನಿವಾಸಿ ಶರತ್ (32) ಮೃತಪಟ್ಟವರು.</p><p>ಇವರು ಮನೆ ಸಮೀಪದ ತೆಂಗಿನಕಾಯಿ ಗುತ್ತಿಗೆದಾರರ ಜತೆ ಅಚ್ಲಾಡಿಯ ತೋಟವೊಂದಕ್ಕೆ ಕೆಲಸಕ್ಕೆ ತೆರಳಿದ್ದು ಮರದಿಂದ ಕಾಯಿ ಕೊಯ್ದು ಟೆಂಪೋಗೆ ಲೋಡ್ ಮಾಡುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಿದರು ಪತ್ತೆಯಾಗಿರಲಿಲ್ಲ. ಮಧ್ಯಾಹ್ನ ಕೈಲೇರಿ ಸಮೀಪದ ತೋಡಿನಲ್ಲಿ ಶವ ಪತ್ತೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ</strong>: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ ಬುಧವಾರ ಸಂಭವಿಸಿದೆ.</p><p>ಅಚ್ಲಾಡಿ ಅಂಬೇಡ್ಕರ್ ಕಾಲನಿ ನಿವಾಸಿ ಶರತ್ (32) ಮೃತಪಟ್ಟವರು.</p><p>ಇವರು ಮನೆ ಸಮೀಪದ ತೆಂಗಿನಕಾಯಿ ಗುತ್ತಿಗೆದಾರರ ಜತೆ ಅಚ್ಲಾಡಿಯ ತೋಟವೊಂದಕ್ಕೆ ಕೆಲಸಕ್ಕೆ ತೆರಳಿದ್ದು ಮರದಿಂದ ಕಾಯಿ ಕೊಯ್ದು ಟೆಂಪೋಗೆ ಲೋಡ್ ಮಾಡುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಿದರು ಪತ್ತೆಯಾಗಿರಲಿಲ್ಲ. ಮಧ್ಯಾಹ್ನ ಕೈಲೇರಿ ಸಮೀಪದ ತೋಡಿನಲ್ಲಿ ಶವ ಪತ್ತೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>