ಈಗಾಗಲೇ ಶಾಸಕ ಲೆ.ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿ ಯಶಸ್ವಿಯಾಗಿ ನಡೆಸಲು ಸ್ವಾಗತ ಸಮಿತಿ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ, ರಾಜ್ಯ ಕಯಾಕಿಂಗ್ ಅಸೋಸಿಯೇಷನ್ ಕಾರ್ಯದರ್ಶಿ ದಿಲೀಪ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ಮತ್ತು ಸ್ಥಳೀಯರು ಪಂದ್ಯಾವಳಿಯ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಡ್ರ್ಯಾಗನ್ ಬೋಟ್ ಪಂದ್ಯಾವಳಿ ಏನೆಂದೂ ಅರಿಯದ ಸ್ಥಳೀಯರು ಪ್ರತಿದಿನ ಇಲ್ಲಿ ನಡೆಯುವ ತರಬೇತಿಯನ್ನು ಕುತೂಹಲದಿಂದ ನೋಡುತ್ತಿದ್ದು, ಪಂದ್ಯಾವಳಿಯ ರೋಮಾಂಚಕ ಕ್ಷಣಗಳನ್ನು ನೋಡಲು ನಿರೀಕ್ಷಿಸುತ್ತಿದ್ದಾರೆ.