<p><strong>ಬ್ರಹ್ಮಾವರ:</strong> ಇಲ್ಲಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಅಕ್ಷರಾಭ್ಯಾಸ ಮತ್ತು ವಿದ್ಯಾರಂಭ ಕಾರ್ಯಕ್ರಮಕ್ಕೆ ಜಗದ್ಗುರು ಶಂಕರಾಚಾರ್ಯ ವಾಸುದೇವ ಸದಾಶಿವಶ್ರಮ ಸ್ವಾಮೀಜಿ ಚಾಲನೆ ನೀಡಿದರು.</p>.<p>‘ನಾವು ಸನಾತನ ಸಂಸ್ಕೃತಿಯ ಭವ್ಯ ಪರಂಪರೆ ಹೊಂದಿದ್ದೇವೆ. ನಮ್ಮ ಪೂರ್ವಿಕರು ನಡೆದು ಬಂದ ದಾರಿಯಲ್ಲಿ ನಾವು ಸಾಗಬೇಕು. ಒಂದು ಪಾತ್ರೆಗೆ ಒಳ್ಳೆಯದು ಅಥವಾ ಕೆಟ್ಟದ್ದು ಏನನ್ನು ಬೇಕಾದರೂ ಹಾಕಬಹುದು, ಆದರೆ, ನಮ್ಮ ಸುತ್ತಮುತ್ತ ಸದ್ವಿಚಾರ ಮತ್ತು ಸತ್ ಚಿಂತನೆಗಳು ಇದ್ದಾಗ ನಾವು ಒಳ್ಳೆಯದನ್ನೇ ಆರಿಸಿಕೊಳ್ಳುತ್ತೇವೆ. ಮುಂದಿನ ಜೀವನಕ್ಕೆ ಅವಶ್ಯವಿಲ್ಲದ ವಿಷಯಗಳನ್ನು ಕಲಿಯುವುದಕ್ಕಿಂತ, ನಮ್ಮ ಸಂಸ್ಕೃತಿಯ ಸೊಗಡನ್ನು ಮೈಗೂಡಿಸಿಕೊಳ್ಳುವ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು’ ಎಂದು ಸ್ವಾಮೀಜಿ ಹೇಳಿದರು.</p>.<p>ರಾಷ್ಟ್ರೋತ್ಥಾನ ಸಿಬಿಎಸ್ಇ ಶಾಲೆಗಳ ಸಹ ಆಡಳಿತಾಧಿಕಾರಿ ವಸಂತ್ ಗುರೂಜಿ ಮಾತನಾಡಿ, ಪ್ರತಿ ಶಾಲೆ ಸಾಮಾಜಿಕ ಪರಿವರ್ತನೆಯ ಕೇಂದ್ರವಾಗಬೇಕು. ಆಧುನಿಕ ಶಿಕ್ಷಣದಲ್ಲಿ ಭಾರತೀಯತೆಯನ್ನು ಮೈಗೂಡಿಸುವುದೇ ರಾಷ್ಟ್ರೋತ್ಥಾನದ ಮುಖ್ಯ ಉದ್ದೇಶ ಎಂದರು. ಕಡುಬಡತನದಲ್ಲಿರುವ ಪ್ರತಿಭಾವಂತ ಮಕ್ಕಳಿಗೆ ರಾಷ್ಟ್ರೋತ್ಥಾನ ವಿದ್ಯಾ ಸಂಸ್ಥೆ ನೀಡುತ್ತಿರುವ ಉಚಿತ ಶಿಕ್ಷಣ ಸೌಲಭ್ಯಗಳ ಕುರಿತು ಅವರು ಮಾಹಿತಿ ನೀಡಿದರು.</p>.<p>ಚೇರ್ಕಾಡಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಮತ್ತು ರಾಷ್ಟ್ರೋತ್ಥಾನ ಪಿಯು ಕಾಲೇಜಿನ ಸಂಚಾಲನ ಸಮಿತಿಯ ಅಧ್ಯಕ್ಷ ಸಾಧು ಸಾಲಿಯಾನ್, ಕಾರ್ಯದರ್ಶಿ ರಿಷಿ ರಾಜ್ ಹಾಗೂ ಸಂಸ್ಥೆಯ ಪ್ರಧಾನ ಶಿಕ್ಷಕಿ ಪೂರ್ಣಿಮಾ ಎಸ್.ಡಿ., ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಭಾಗ್ಯಶ್ರೀ ಐತಾಳ್, ಆಡಳಿತ ಅಧಿಕಾರಿ ಸುರೇಶ ಹೆಜಮಾಡಿ, ಸಂಚಾಲನಾ ಸಮಿತಿಯ ಸದಸ್ಯರಾದ ಮಿಥುನ್ ಕುಂದರ್ ಮತ್ತು ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.</p>.<p>ವಿದ್ಯಾ ಕೇಂದ್ರದ ಶಿಕ್ಷಕಿ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರಿಯದರ್ಶಿನಿ ಶೆಟ್ಟಿ ಸ್ವಾಗತಿಸಿದರು. ಕಾವ್ಯ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-28-1034125703</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಇಲ್ಲಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಅಕ್ಷರಾಭ್ಯಾಸ ಮತ್ತು ವಿದ್ಯಾರಂಭ ಕಾರ್ಯಕ್ರಮಕ್ಕೆ ಜಗದ್ಗುರು ಶಂಕರಾಚಾರ್ಯ ವಾಸುದೇವ ಸದಾಶಿವಶ್ರಮ ಸ್ವಾಮೀಜಿ ಚಾಲನೆ ನೀಡಿದರು.</p>.<p>‘ನಾವು ಸನಾತನ ಸಂಸ್ಕೃತಿಯ ಭವ್ಯ ಪರಂಪರೆ ಹೊಂದಿದ್ದೇವೆ. ನಮ್ಮ ಪೂರ್ವಿಕರು ನಡೆದು ಬಂದ ದಾರಿಯಲ್ಲಿ ನಾವು ಸಾಗಬೇಕು. ಒಂದು ಪಾತ್ರೆಗೆ ಒಳ್ಳೆಯದು ಅಥವಾ ಕೆಟ್ಟದ್ದು ಏನನ್ನು ಬೇಕಾದರೂ ಹಾಕಬಹುದು, ಆದರೆ, ನಮ್ಮ ಸುತ್ತಮುತ್ತ ಸದ್ವಿಚಾರ ಮತ್ತು ಸತ್ ಚಿಂತನೆಗಳು ಇದ್ದಾಗ ನಾವು ಒಳ್ಳೆಯದನ್ನೇ ಆರಿಸಿಕೊಳ್ಳುತ್ತೇವೆ. ಮುಂದಿನ ಜೀವನಕ್ಕೆ ಅವಶ್ಯವಿಲ್ಲದ ವಿಷಯಗಳನ್ನು ಕಲಿಯುವುದಕ್ಕಿಂತ, ನಮ್ಮ ಸಂಸ್ಕೃತಿಯ ಸೊಗಡನ್ನು ಮೈಗೂಡಿಸಿಕೊಳ್ಳುವ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು’ ಎಂದು ಸ್ವಾಮೀಜಿ ಹೇಳಿದರು.</p>.<p>ರಾಷ್ಟ್ರೋತ್ಥಾನ ಸಿಬಿಎಸ್ಇ ಶಾಲೆಗಳ ಸಹ ಆಡಳಿತಾಧಿಕಾರಿ ವಸಂತ್ ಗುರೂಜಿ ಮಾತನಾಡಿ, ಪ್ರತಿ ಶಾಲೆ ಸಾಮಾಜಿಕ ಪರಿವರ್ತನೆಯ ಕೇಂದ್ರವಾಗಬೇಕು. ಆಧುನಿಕ ಶಿಕ್ಷಣದಲ್ಲಿ ಭಾರತೀಯತೆಯನ್ನು ಮೈಗೂಡಿಸುವುದೇ ರಾಷ್ಟ್ರೋತ್ಥಾನದ ಮುಖ್ಯ ಉದ್ದೇಶ ಎಂದರು. ಕಡುಬಡತನದಲ್ಲಿರುವ ಪ್ರತಿಭಾವಂತ ಮಕ್ಕಳಿಗೆ ರಾಷ್ಟ್ರೋತ್ಥಾನ ವಿದ್ಯಾ ಸಂಸ್ಥೆ ನೀಡುತ್ತಿರುವ ಉಚಿತ ಶಿಕ್ಷಣ ಸೌಲಭ್ಯಗಳ ಕುರಿತು ಅವರು ಮಾಹಿತಿ ನೀಡಿದರು.</p>.<p>ಚೇರ್ಕಾಡಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಮತ್ತು ರಾಷ್ಟ್ರೋತ್ಥಾನ ಪಿಯು ಕಾಲೇಜಿನ ಸಂಚಾಲನ ಸಮಿತಿಯ ಅಧ್ಯಕ್ಷ ಸಾಧು ಸಾಲಿಯಾನ್, ಕಾರ್ಯದರ್ಶಿ ರಿಷಿ ರಾಜ್ ಹಾಗೂ ಸಂಸ್ಥೆಯ ಪ್ರಧಾನ ಶಿಕ್ಷಕಿ ಪೂರ್ಣಿಮಾ ಎಸ್.ಡಿ., ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಭಾಗ್ಯಶ್ರೀ ಐತಾಳ್, ಆಡಳಿತ ಅಧಿಕಾರಿ ಸುರೇಶ ಹೆಜಮಾಡಿ, ಸಂಚಾಲನಾ ಸಮಿತಿಯ ಸದಸ್ಯರಾದ ಮಿಥುನ್ ಕುಂದರ್ ಮತ್ತು ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.</p>.<p>ವಿದ್ಯಾ ಕೇಂದ್ರದ ಶಿಕ್ಷಕಿ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರಿಯದರ್ಶಿನಿ ಶೆಟ್ಟಿ ಸ್ವಾಗತಿಸಿದರು. ಕಾವ್ಯ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-28-1034125703</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>