<p><strong>ಬೆನಗಲ್(ಬ್ರಹ್ಮಾವರ):</strong> ಪುರಾತನ ಸಂಸ್ಕೃತಿ, ಸಂಪ್ರದಾಯಕ್ಕೆ ಮರಾಠಿ ಬಾಂಧವರ ಕೊಡುಗೆ ಅಪಾರ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.</p>.<p>ಬ್ರಹ್ಮಾವರ ತಾಲ್ಲೂಕಿನ ಚೇರ್ಕಾಡಿ ಬೆನಗಲ್ ಸಾಸ್ತಾವಿನಲ್ಲಿ ₹40 ಲಕ್ಷ ವೆಚ್ಚದಲ್ಲಿ ನಡೆಯುವ ಅಂಬಾ ಭವಾನಿ ಕಟ್ಟೆ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ನಮ್ಮ ಸಂಸ್ಕೃತಿಯನ್ನು ಇಂದಿನ ಯುವಜನಾಂಗ ಉಳಿಸಿ, ಬೆಳೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಗುರಿಕಾರ ಆನಂದ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.</p>.<p>ಇದೇ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ಗೌರವಿಸಲಾಯಿತು.</p>.<p>ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಉಡುಪ, ಜಿಲ್ಲಾ ಮರಾಠಿ ಸಂಘದ ಅಧ್ಯಕ್ಷ ಉಮೇಶ ನಾಯ್ಕ ಚೇರ್ಕಾಡಿ, ಚೇರ್ಕಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಗ್ರಾಮಸ್ಥರಾದ ದಿನೇಶ್ ನಾಯ್ಕ, ಮಂಜುನಾಥ ನಾಯ್ಕ, ವಿಶ್ವನಾಥ ನಾಯ್ಕ ಇದ್ದರು.</p>.<p>ವಿಠಲ ನಾಯ್ಕ ಸ್ವಾಗತಿಸಿದರು. ಉದಯ ನಾಯ್ಕ ವಂದಿಸಿದರು. ರಾಜೇಶ್ ನಾಯ್ಕ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆನಗಲ್(ಬ್ರಹ್ಮಾವರ):</strong> ಪುರಾತನ ಸಂಸ್ಕೃತಿ, ಸಂಪ್ರದಾಯಕ್ಕೆ ಮರಾಠಿ ಬಾಂಧವರ ಕೊಡುಗೆ ಅಪಾರ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.</p>.<p>ಬ್ರಹ್ಮಾವರ ತಾಲ್ಲೂಕಿನ ಚೇರ್ಕಾಡಿ ಬೆನಗಲ್ ಸಾಸ್ತಾವಿನಲ್ಲಿ ₹40 ಲಕ್ಷ ವೆಚ್ಚದಲ್ಲಿ ನಡೆಯುವ ಅಂಬಾ ಭವಾನಿ ಕಟ್ಟೆ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ನಮ್ಮ ಸಂಸ್ಕೃತಿಯನ್ನು ಇಂದಿನ ಯುವಜನಾಂಗ ಉಳಿಸಿ, ಬೆಳೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಗುರಿಕಾರ ಆನಂದ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.</p>.<p>ಇದೇ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ಗೌರವಿಸಲಾಯಿತು.</p>.<p>ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಉಡುಪ, ಜಿಲ್ಲಾ ಮರಾಠಿ ಸಂಘದ ಅಧ್ಯಕ್ಷ ಉಮೇಶ ನಾಯ್ಕ ಚೇರ್ಕಾಡಿ, ಚೇರ್ಕಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಗ್ರಾಮಸ್ಥರಾದ ದಿನೇಶ್ ನಾಯ್ಕ, ಮಂಜುನಾಥ ನಾಯ್ಕ, ವಿಶ್ವನಾಥ ನಾಯ್ಕ ಇದ್ದರು.</p>.<p>ವಿಠಲ ನಾಯ್ಕ ಸ್ವಾಗತಿಸಿದರು. ಉದಯ ನಾಯ್ಕ ವಂದಿಸಿದರು. ರಾಜೇಶ್ ನಾಯ್ಕ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>