ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ನೇತೃತ್ವದ ರಾಜ್ಯ ಸಮಿತಿ ಶನಿವಾರ ಉಡುಪಿ ತಾಲ್ಲೂಕು ಕಚೇರಿ ಹಾಗೂ ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿನೀಡಿ ಲಂಚ ಮುಕ್ತ ಅಭಿಯಾನ ನಡೆಸಲಿದೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಅಧಿಕಾರಿಗಳು ಲಂಚ ಕೇಳಿದರೆ, ಸತಾಯಿಸುತ್ತಿದ್ದರೆ ಕೆಆರ್ಎಸ್ ಪಕ್ಷದ ಮುಖಂಡರನ್ನು ಸಂಪರ್ಕಿಸಬಹುದು ಎಂದರು.