<p><strong>ಉಡುಪಿ</strong>: ಮರ ತೆರವುಗೊಳಿಸಲು ನಿರಾಕ್ಷೇಪಣಾ ಪತ್ರ ನೀಡುವುದಕ್ಕಾಗಿ ಲಂಚ ಪಡೆಯುತ್ತಿದ್ದ ವೇಳೆ ಉಪ ವಲಯ ಅರಣ್ಯಾಧಿಕಾರಿಯನ್ನು ಉಡುಪಿಯ ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಬೈಂದೂರು ವಲಯದ ಉಪ ವಲಯ ಅರಣ್ಯಾಧಿಕಾರಿ ಬಂಗಾರಪ್ಪ ಬಂಧಿತ ಆರೋಪಿ. ಬೈಂದೂರು ಅರಣ್ಯ ವೀಕ್ಷಕ ವಿನಾಯಕ ಎಂಬುವರು ದಾಳಿಯ ವೇಳೆ ಪರಾರಿಯಾಗಿದ್ದಾರೆ ಎಂದು ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆ.ಸಿ. ತಿಳಿಸಿದರು.</p>.<p>‘ಶಿರೂರಿನ ಮುಹಮ್ಮದ್ ಅನ್ವರ್ ಹಸನ್ ಅವರು ತಮ್ಮ ಜಾಗದಲ್ಲಿರುವ ಹಲಸಿನ ಮರವನ್ನು ತೆರವುಗೊಳಿಸಲು ನಿರಾಕ್ಷೇಪಣಾ ಪತ್ರಕ್ಕಾಗಿ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ₹4,000 ಲಂಚ ನೀಡಬೇಕೆಂದು ಬಂಗಾರಪ್ಪ ಬೇಡಿಕೆ ಇಟ್ಟಿದ್ದರು. ಈ ಕುರಿತು ಅನ್ವರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು’ ಎಂದು ಅವರು ಹೇಳಿದರು.</p>.<p>ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಮರ ತೆರವುಗೊಳಿಸಲು ನಿರಾಕ್ಷೇಪಣಾ ಪತ್ರ ನೀಡುವುದಕ್ಕಾಗಿ ಲಂಚ ಪಡೆಯುತ್ತಿದ್ದ ವೇಳೆ ಉಪ ವಲಯ ಅರಣ್ಯಾಧಿಕಾರಿಯನ್ನು ಉಡುಪಿಯ ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಬೈಂದೂರು ವಲಯದ ಉಪ ವಲಯ ಅರಣ್ಯಾಧಿಕಾರಿ ಬಂಗಾರಪ್ಪ ಬಂಧಿತ ಆರೋಪಿ. ಬೈಂದೂರು ಅರಣ್ಯ ವೀಕ್ಷಕ ವಿನಾಯಕ ಎಂಬುವರು ದಾಳಿಯ ವೇಳೆ ಪರಾರಿಯಾಗಿದ್ದಾರೆ ಎಂದು ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆ.ಸಿ. ತಿಳಿಸಿದರು.</p>.<p>‘ಶಿರೂರಿನ ಮುಹಮ್ಮದ್ ಅನ್ವರ್ ಹಸನ್ ಅವರು ತಮ್ಮ ಜಾಗದಲ್ಲಿರುವ ಹಲಸಿನ ಮರವನ್ನು ತೆರವುಗೊಳಿಸಲು ನಿರಾಕ್ಷೇಪಣಾ ಪತ್ರಕ್ಕಾಗಿ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ₹4,000 ಲಂಚ ನೀಡಬೇಕೆಂದು ಬಂಗಾರಪ್ಪ ಬೇಡಿಕೆ ಇಟ್ಟಿದ್ದರು. ಈ ಕುರಿತು ಅನ್ವರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು’ ಎಂದು ಅವರು ಹೇಳಿದರು.</p>.<p>ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>