ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಹಲವು ಭಾಗಗಳಲ್ಲಿ ಕ್ರಾಸಿಂಗ್ ನಿರ್ಮಾಣ ಮಾಡುವ ಅಗತ್ಯತೆ ಇದ್ದು, ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ವಿನಂತಿ ಮಾಡಲಾಗಿತ್ತು. ಮನವಿ ಪುರಸ್ಕರಿಸಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ, ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ₹ 4.36 ಕೋಟಿ ವೆಚ್ಚದಲ್ಲಿ ಪಾದಚಾರಿ ಕಾಲುಸೇತುವೆಗಳನ್ನು ನಿರ್ಮಿಸಲು ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದ್ದಾರೆ.