<p><strong>ಕಾರ್ಕಳ : </strong>ಇಲ್ಲಿನ ಕರಿಯಕಲ್ಲು ನಿವಾಸಿ ರಾಜಾರಾಮ ರಾವ್(55) ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದು, ಅವರ ಅಣ್ಣ ಸಾಣೂರು ಚಿಕ್ಕ<br />ಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.</p>.<p>ಜೂನ್ 8 ರಂದು ತಾಲ್ಲೂಕಿನ ಜಾರ್ಕಳ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ರಾಜಾರಾಮ ರಾವ್ ಅವರು ಚಿಕಿತ್ಸೆಗೆ ಸ್ಪಂದಿಸದೆ, ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೋವಿಡ್ ಕಾರಣಕ್ಕೆ ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶ್ ರಾವ್ ಸಂಜೆ ವೇಳೆ ನಿಧನರಾದರು.</p>.<p>ವೃತ್ತಿಯಲ್ಲಿ ಟೇಲರ್, ಟೆಂಪೋ ಚಾಲಕರಾಗಿದ್ದ ರಾಜಾರಾಮ ಕರಿಯ<br />ಕಲ್ಲು ಹಿಂದೂ ರುದ್ರಭೂಮಿಯಲ್ಲಿ ಕೋವಿಡ್ನಿಂದ ಮೃತಪಟ್ಟ 40ಕ್ಕೂ ಅಧಿಕ ಜನರ ಅಂತಿಮ ಸಂಸ್ಕಾರ ನೇರವೇರಿಸಿದ್ದರು. ಅವರು ಕಳೆದ 2 ದಶಕಗಳಲ್ಲಿ ಸಾವಿರಕ್ಕೂ ಅಧಿಕ ಮೃತದೇಹಗಳ ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ. ಕ್ರೀಡೆ, ಭಜನೆ, ರಕ್ತದಾನ, ಸಾಮಾಜಿಕ ಕಾರ್ಯಗಳಲ್ಲೂ ಅವರು ಸಕ್ರಿಯರಾಗಿದ್ದರು ಎಂದು ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್ ತಿಳಿಸಿದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.</p>.<p>ನಾಸಿಕ್ನಲ್ಲಿ ವ್ಯವಹಾರ ನಡೆಸುತ್ತಿದ್ದ ಗಣೇಶ್ ರಾವ್ ಕೆಲ ವರ್ಷಗಳ ಹಿಂದೆ ಊರಿಗೆ ಬಂದು ಜಮೀನು ಖರೀದಿಸಿ, ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ : </strong>ಇಲ್ಲಿನ ಕರಿಯಕಲ್ಲು ನಿವಾಸಿ ರಾಜಾರಾಮ ರಾವ್(55) ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದು, ಅವರ ಅಣ್ಣ ಸಾಣೂರು ಚಿಕ್ಕ<br />ಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.</p>.<p>ಜೂನ್ 8 ರಂದು ತಾಲ್ಲೂಕಿನ ಜಾರ್ಕಳ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ರಾಜಾರಾಮ ರಾವ್ ಅವರು ಚಿಕಿತ್ಸೆಗೆ ಸ್ಪಂದಿಸದೆ, ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೋವಿಡ್ ಕಾರಣಕ್ಕೆ ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶ್ ರಾವ್ ಸಂಜೆ ವೇಳೆ ನಿಧನರಾದರು.</p>.<p>ವೃತ್ತಿಯಲ್ಲಿ ಟೇಲರ್, ಟೆಂಪೋ ಚಾಲಕರಾಗಿದ್ದ ರಾಜಾರಾಮ ಕರಿಯ<br />ಕಲ್ಲು ಹಿಂದೂ ರುದ್ರಭೂಮಿಯಲ್ಲಿ ಕೋವಿಡ್ನಿಂದ ಮೃತಪಟ್ಟ 40ಕ್ಕೂ ಅಧಿಕ ಜನರ ಅಂತಿಮ ಸಂಸ್ಕಾರ ನೇರವೇರಿಸಿದ್ದರು. ಅವರು ಕಳೆದ 2 ದಶಕಗಳಲ್ಲಿ ಸಾವಿರಕ್ಕೂ ಅಧಿಕ ಮೃತದೇಹಗಳ ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ. ಕ್ರೀಡೆ, ಭಜನೆ, ರಕ್ತದಾನ, ಸಾಮಾಜಿಕ ಕಾರ್ಯಗಳಲ್ಲೂ ಅವರು ಸಕ್ರಿಯರಾಗಿದ್ದರು ಎಂದು ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್ ತಿಳಿಸಿದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.</p>.<p>ನಾಸಿಕ್ನಲ್ಲಿ ವ್ಯವಹಾರ ನಡೆಸುತ್ತಿದ್ದ ಗಣೇಶ್ ರಾವ್ ಕೆಲ ವರ್ಷಗಳ ಹಿಂದೆ ಊರಿಗೆ ಬಂದು ಜಮೀನು ಖರೀದಿಸಿ, ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>