ಖಾಸಗಿ ಸಂಸ್ಥೆಯು ಸರಿಯಾಗಿ ಆಸ್ಪತ್ರೆಯನ್ನು ನಿರ್ವಹಣೆ ಮಾಡದ ಪರಿಣಾಮ ಸಿಬ್ಬಂದಿಗೆ ವೇತನ ಸಮಸ್ಯೆ ಉಂಟಾಗಿತ್ತು. ಬಡ ರೋಗಿಗಳಿಗೆ ಸಮರ್ಪಕ ಚಿಕಿತ್ಸೆಯೂ ದೊರೆಯುತ್ತಿರಲಿಲ್ಲ. ಈ ವಿಚಾರವನ್ನು ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಸಮಸ್ಯೆ ಪರಿಹರಿಸುವಂತೆ ಆರೋಗ್ಯ ಸಚಿವ ಸುಧಾರಕರ್ ಅವರಿಗೆ ಮನವಿ ಮಾಡಲಾಗಿತ್ತು.