ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಿದ್ದಕ್ಕೆ ಪ್ರತಿಯಾಗಿ ಸರ್ಕಾರ ಕೆಎಸ್ಆರ್ಟಿಸಿಗೆ ಇದುವರೆಗೂ ₹ 2,400 ಕೋಟಿ ಅನುದಾನ ನೀಡಿದೆ. ಖಾಸಗಿ ಬಸ್ಗಳು ಕೂಡ ವಿದ್ಯಾರ್ಥಿಗಳಿಗೆ ಹಾಗೂ ನಿತ್ಯ ಪ್ರಯಾಣಿಸುವವರಿಗೆ ರಿಯಾಯಿತಿ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ಸರ್ಕಾರದಿಂದ ಯಾವುದೇ ಆರ್ಥಿಕ ನೆರವು ಸಿಗುತ್ತಿಲ್ಲ. ಪರ್ಯಾಯವಾಗಿ 6 ತಿಂಗಳ ತೆರಿಗೆ ವಿನಾಯಿತಿ ನೀಡಿದರೆ ಅನುಕೂಲವಾಗಲಿದೆ ಎಂದರು.