ಕುಂದಾಪುರದಲ್ಲಿ ಶನಿವಾರ ಬಸ್ಸು ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ತಹಶೀಲ್ದಾರ್ ಹೆಚ್.ಎಸ್.ಶೋಭಾಲಕ್ಷ್ಮೀ ಅವರಿಗೆ ಮನವಿ ನೀಡಲಾಯಿತು.
ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಸಮಾಧಾನದಿಂದ ವರ್ತನೆ ತೋರಬೇಕು. ಸಮಸ್ಯೆಗಳನ್ನು ಸಹನೆಯಿಂದ ಆಲಿಸಬೇಕು. ಮೇಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆ ಪರಿಹಾರಕ್ಕೆ ಪ್ರಮಾಣಿಕ ಪ್ರಯತ್ನ ಮಾಡಬೇಕು. ಅಗತ್ಯವಿದ್ದಲ್ಲಿ ಇತರ ಇಲಾಖೆಯ ಅಧಿಕಾರಿಗಳೊಂದಿಗೆ ನಾನು ಮಾತನಾಡುತ್ತೇನೆ.