ನಾಲ್ಕನೇ ಆರೋಪಿಯಾಗಿರುವ ನಿರಂಜನ್ ಭಟ್ ತಂದೆ ಅನಾರೋಗ್ಯದಿಂದ ಮೃತಪಟ್ಟಿದ್ದು, ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದ ಐದನೇ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಮಂಗಳವಾರ ಮಧ್ಯಾಹ್ನ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಪ್ರಕಟಿಸಲಿದ್ದಾರೆ.