ಉಡುಪಿ: ಬೈಂದೂರು ತಾಲ್ಲೂಕಿನ ಉಪ್ಪುಂದ ಪ್ರೌಢಶಾಲೆಯಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಹಾಗೂ ಕೇಸರಿಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶ ನೀಡಲಾಗಿದೆ.
ಪರೀಕ್ಷೆ ನಡೆಯುತ್ತಿರುವುದರಿಂದ ಶಾಲಾ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದ್ದು, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಹಾಗೂ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ತರಗತಿಯಲ್ಲಿ ಒಟ್ಟಿಗೆ ಕುಳಿತು ಪರೀಕ್ಷೆ ಬರೆಯುತ್ತಿದ್ದಾರೆ.
ಕಂಬದಕೋಣೆ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.