<p><strong>ಬೈಂದೂರು:</strong> ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸದ್ಯ ನೀರಿನ ಸಮಸ್ಯೆ ಇಲ್ಲದಿದ್ದರೂ ಮಾರ್ಚ್ ತಿಂಗಳಿನಿಂದ ತಾರಾಪತಿ, ಯಡ್ತರೆ, ಆಲಂದೂರು, ದುರ್ಮಿ, ಗರ್ಜಿನಹಿತ್ಲು, ತೊಂಡೆಮಕ್ಕಿ ಮುಂತಾದೆಡೆ ನೀರಿನ ಸಮಸ್ಯೆ ಉಂಟಾಗುವ ಆತಂಕ ಎದುರಾಗಿದೆ.</p>.<p>ಜಲಜೀವನ್ ಮಿಷನ್ ಯೋಜನೆಯಡಿ ಈ ಭಾಗದ ಎಲ್ಲಾ ಕಡೆಗಳಲ್ಲಿ ಪೈಪ್ಲೈನ್ ಮಾಡಲಾಗಿದೆ. ವಾರಾಹಿ, ಹೊಸಂಗಡಿ ನೀರು ಸಂಸ್ಕರಣಾ ಘಟಕದಿಂದ ನೀರು ಸರಬರಾಜು ಆಗಬೇಕಾಗಿದ್ದು ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನೀರಿನ ಸಂಪರ್ಕ ನೀಡಿಲ್ಲ.</p>.<p>ಕಳೆದ ವರ್ಷ ವತ್ತಿನಣೆಯಲ್ಲಿ ₹ 6 ಲಕ್ಷ ವೆಚ್ಚದ 50 ಸಾವಿರ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗಿದ್ದು, ಈ ವರ್ಷದಿಂದ ಕಾರ್ಯಾರಂಭಗೊಂಡಿದೆ. ಅದರ ನೀರನ್ನು ತುರ್ತು ಸಂದರ್ಭಗಳಲ್ಲಿ ಬಳಸಿಕೊಳ್ಳಲು ಕಾಯ್ದಿರಿಸಿಕೊಂಡು ಪಟ್ಟಣ ಪಂಚಾಯಿತಿಯ ಮೂರು ವಾಹನಗಳಿಗೆ ಎರಡು ಸಾವಿರ ಲೀಟರ್ ಸಾಮರ್ಥ್ಯದ ಟ್ಯಾಂಕ್ ಅಳವಡಿಸಿ ಅಗತ್ಯವಿರುವಲ್ಲಿ ನೀರನ್ನು ಸರಬರಾಜು ಮಾಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.</p>.<p>ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 24,957 ಜನಸಂಖ್ಯೆ ಮತ್ತು 5,320 ಮನೆಗಳಿದ್ದು, ಒಟ್ಟು 1071 ನಳ್ಳಿ ಸಂಪರ್ಕ ಕಲ್ಪಿಸಲಾಗಿದೆ.</p>.<p>5 ಸಾವಿರ ಮನೆಗಳಿಗೆ ನಳ್ಳಿ ಸಂಪರ್ಕದ ಬೇಡಿಕೆ ಇರುವುದರಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗಂಟೆಹೊಳೆ ಪ್ರದೇಶದಲ್ಲಿ ಹರಿಯುವ ಸುಮಾನಾವತಿ ನದಿಯ ಮೂಲವನ್ನು ಗುರುತಿಸಿದ್ದು, ಈ ನದಿಯಲ್ಲಿ ಬೇಸಿಗೆಯಲ್ಲಿ ನೀರು ಲಭ್ಯವಿರುವುದರಿಂದ ಈ ನೀರನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ಬಳಸುವ ಸಂಬಂಧ ಯೋಜನೆಯನ್ನು ರೂಪಿಸಲಾಗಿದೆ.</p>.<p>ಈ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಶೀಲನಾ ವರದಿ ಹಾಗೂ ನಿರಾಕ್ಷೇಪಣಾ ಪತ್ರ ನೀಡಲಾಗಿದೆ. ಆದರೆ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಅಗತ್ಯವಿದ್ದು ಈಗಾಗಲೇ ಬೈಂದೂರು ವಲಯ ಅರಣ್ಯಾಧಿಕಾರಿಗಳು ವಿಭಾಗೀಯ ಅರಣ್ಯಾಧಿಕಾರಿಗಳಿಗೆ ಪ್ರಸ್ತಾವ ಕಳುಹಿಸಿದ್ದಾರೆ. ನಿರಾಕ್ಷೇಪಣಾ ಪತ್ರಕ್ಕಾಗಿ ಕಾಯಲಾಗುತ್ತಿದೆ. ಈ ಯೋಜನೆಯು ಕಾರ್ಯರೂಪಕ್ಕೆ ಬಂದಲ್ಲಿ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ 24 X 7 ಮಾದರಿಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಸಾಧ್ಯವಾಗಲಿದೆ.</p>.<p>ಪಟ್ಟಣ ಪಂಚಾಯತಿ ಸಮಿತಿ ರಚನೆಯಾಗದ ಕಾರಣ ಯಾವುದೇ ಹೊಸ ಯೋಜನೆ ರೂಪಿಸಲು ಅನುದಾನ ಬಿಡುಗಡೆಗೊಳ್ಳುತ್ತಿಲ್ಲ.</p>.<p>ತಾರಾಪತಿ, ಯಡ್ತರೆ, ಆಲಂದೂರು, ದುರ್ಮಿ, ಗರ್ಜಿನಹಿತ್ಲು, ತೊಂಡೆಮಕ್ಕಿ ಮುಂತಾದೆಡೆ ನೀರಿನ ಸಮಸ್ಯೆ ಎದುರಾದರೆ ಎರಡು ದಿನಗಳಿಗೊಮ್ಮೆ ನಳ್ಳಿ ಅಥವಾ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹೇಳಿದ್ದಾರೆ.</p>.<div><blockquote>ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ರಮ ನಳ್ಳಿ ಸಂಪರ್ಕಕ್ಕೆ ಹಾಗೂ ನೀರು ಪೋಲಾಗದಂತೆ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಅಜಯ್ ಭಂಡಾರ್ಕರ್ ಬೈಂದೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಂದೂರು:</strong> ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸದ್ಯ ನೀರಿನ ಸಮಸ್ಯೆ ಇಲ್ಲದಿದ್ದರೂ ಮಾರ್ಚ್ ತಿಂಗಳಿನಿಂದ ತಾರಾಪತಿ, ಯಡ್ತರೆ, ಆಲಂದೂರು, ದುರ್ಮಿ, ಗರ್ಜಿನಹಿತ್ಲು, ತೊಂಡೆಮಕ್ಕಿ ಮುಂತಾದೆಡೆ ನೀರಿನ ಸಮಸ್ಯೆ ಉಂಟಾಗುವ ಆತಂಕ ಎದುರಾಗಿದೆ.</p>.<p>ಜಲಜೀವನ್ ಮಿಷನ್ ಯೋಜನೆಯಡಿ ಈ ಭಾಗದ ಎಲ್ಲಾ ಕಡೆಗಳಲ್ಲಿ ಪೈಪ್ಲೈನ್ ಮಾಡಲಾಗಿದೆ. ವಾರಾಹಿ, ಹೊಸಂಗಡಿ ನೀರು ಸಂಸ್ಕರಣಾ ಘಟಕದಿಂದ ನೀರು ಸರಬರಾಜು ಆಗಬೇಕಾಗಿದ್ದು ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನೀರಿನ ಸಂಪರ್ಕ ನೀಡಿಲ್ಲ.</p>.<p>ಕಳೆದ ವರ್ಷ ವತ್ತಿನಣೆಯಲ್ಲಿ ₹ 6 ಲಕ್ಷ ವೆಚ್ಚದ 50 ಸಾವಿರ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗಿದ್ದು, ಈ ವರ್ಷದಿಂದ ಕಾರ್ಯಾರಂಭಗೊಂಡಿದೆ. ಅದರ ನೀರನ್ನು ತುರ್ತು ಸಂದರ್ಭಗಳಲ್ಲಿ ಬಳಸಿಕೊಳ್ಳಲು ಕಾಯ್ದಿರಿಸಿಕೊಂಡು ಪಟ್ಟಣ ಪಂಚಾಯಿತಿಯ ಮೂರು ವಾಹನಗಳಿಗೆ ಎರಡು ಸಾವಿರ ಲೀಟರ್ ಸಾಮರ್ಥ್ಯದ ಟ್ಯಾಂಕ್ ಅಳವಡಿಸಿ ಅಗತ್ಯವಿರುವಲ್ಲಿ ನೀರನ್ನು ಸರಬರಾಜು ಮಾಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.</p>.<p>ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 24,957 ಜನಸಂಖ್ಯೆ ಮತ್ತು 5,320 ಮನೆಗಳಿದ್ದು, ಒಟ್ಟು 1071 ನಳ್ಳಿ ಸಂಪರ್ಕ ಕಲ್ಪಿಸಲಾಗಿದೆ.</p>.<p>5 ಸಾವಿರ ಮನೆಗಳಿಗೆ ನಳ್ಳಿ ಸಂಪರ್ಕದ ಬೇಡಿಕೆ ಇರುವುದರಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗಂಟೆಹೊಳೆ ಪ್ರದೇಶದಲ್ಲಿ ಹರಿಯುವ ಸುಮಾನಾವತಿ ನದಿಯ ಮೂಲವನ್ನು ಗುರುತಿಸಿದ್ದು, ಈ ನದಿಯಲ್ಲಿ ಬೇಸಿಗೆಯಲ್ಲಿ ನೀರು ಲಭ್ಯವಿರುವುದರಿಂದ ಈ ನೀರನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ಬಳಸುವ ಸಂಬಂಧ ಯೋಜನೆಯನ್ನು ರೂಪಿಸಲಾಗಿದೆ.</p>.<p>ಈ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಶೀಲನಾ ವರದಿ ಹಾಗೂ ನಿರಾಕ್ಷೇಪಣಾ ಪತ್ರ ನೀಡಲಾಗಿದೆ. ಆದರೆ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಅಗತ್ಯವಿದ್ದು ಈಗಾಗಲೇ ಬೈಂದೂರು ವಲಯ ಅರಣ್ಯಾಧಿಕಾರಿಗಳು ವಿಭಾಗೀಯ ಅರಣ್ಯಾಧಿಕಾರಿಗಳಿಗೆ ಪ್ರಸ್ತಾವ ಕಳುಹಿಸಿದ್ದಾರೆ. ನಿರಾಕ್ಷೇಪಣಾ ಪತ್ರಕ್ಕಾಗಿ ಕಾಯಲಾಗುತ್ತಿದೆ. ಈ ಯೋಜನೆಯು ಕಾರ್ಯರೂಪಕ್ಕೆ ಬಂದಲ್ಲಿ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ 24 X 7 ಮಾದರಿಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಸಾಧ್ಯವಾಗಲಿದೆ.</p>.<p>ಪಟ್ಟಣ ಪಂಚಾಯತಿ ಸಮಿತಿ ರಚನೆಯಾಗದ ಕಾರಣ ಯಾವುದೇ ಹೊಸ ಯೋಜನೆ ರೂಪಿಸಲು ಅನುದಾನ ಬಿಡುಗಡೆಗೊಳ್ಳುತ್ತಿಲ್ಲ.</p>.<p>ತಾರಾಪತಿ, ಯಡ್ತರೆ, ಆಲಂದೂರು, ದುರ್ಮಿ, ಗರ್ಜಿನಹಿತ್ಲು, ತೊಂಡೆಮಕ್ಕಿ ಮುಂತಾದೆಡೆ ನೀರಿನ ಸಮಸ್ಯೆ ಎದುರಾದರೆ ಎರಡು ದಿನಗಳಿಗೊಮ್ಮೆ ನಳ್ಳಿ ಅಥವಾ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹೇಳಿದ್ದಾರೆ.</p>.<div><blockquote>ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ರಮ ನಳ್ಳಿ ಸಂಪರ್ಕಕ್ಕೆ ಹಾಗೂ ನೀರು ಪೋಲಾಗದಂತೆ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಅಜಯ್ ಭಂಡಾರ್ಕರ್ ಬೈಂದೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>