<p>ಬೈಂದೂರು: ನೆಮ್ಮದಿಯ ಜೀವನಕ್ಕೆ ಆರೋಗ್ಯ ಮುಖ್ಯ. ಅದರಲ್ಲೂ ಕಣ್ಣಿನ ಸುರಕ್ಷತೆಯ ಬಗ್ಗೆ ಅಗತ್ಯ ಗಮನ ಹರಿಸಬೇಕು ಎಂದು ನಾವುಂದದ ಮರವಂತೆ- ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ ಪೂಜಾರಿ ಹಕ್ಕಾಡಿ ಹೇಳಿದರು.</p>.<p>ನಾವುಂದದ ಹಿಂದೂ ಅಭ್ಯುದಯ ಸಂಘ, ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ, ನಾವುಂದ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಶಿರೂರು- ಮುದ್ದುಮನೆ ಆಶ್ರಯದಲ್ಲಿ ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ನಡೆದ ಉಚಿತ ಕನ್ನಡಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಹಿಂದೂ ಅಭ್ಯುದಯ ಸಂಘವು ಕಣ್ಣಿನ ತಪಾಸಣೆಯ ಬಗ್ಗೆ ಒತ್ತು ನೀಡಿ, ಪ್ರತಿವರ್ಷ ಉಚಿತ ನೇತ್ರ ಚಿಕಿತ್ಸಾ ಶಿಬಿರ ಏರ್ಪಡಿಸುತ್ತಿದೆ. ಇದರಿಂದ ನೂರಾರು ಜನರಿಗೆ ಅನುಕೂಲ ಆಗುತ್ತಿದ್ದು, ಪ್ರಶಂಸನೀಯ ಕಾರ್ಯವಾಗಿದೆ ಎಂದರು.</p>.<p>ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸಹಕಾರದಲ್ಲಿ 74 ಜನರಿಗೆ ₹50 ಸಾವಿರ ಮೌಲ್ಯದ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು.</p>.<p>ಹಿಂದೂ ಅಭ್ಯುದಯ ಸಂಘದ ಎನ್. ಸಂಜೀವ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಮರವಂತೆ- ಬಡಾಕೆರೆ ವ್ಯವಸಾಯ ಸಂಘದ ನಿರ್ದೇಶಕ ರಾಮ ಕಂತಿಹೊಂಡ, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ನೇತ್ರ ತಪಾಸಕ ರವಿ, ಸುರೇಶ ಸುವರ್ಣ ಮತ್ತು ಜಿತೇಶ್ ಕೆ. ಪೂಜಾರಿ ಇದ್ದರು.</p>.<p>ಸಂಘದ ಕಾರ್ಯದರ್ಶಿ ಎ. ಶಿವರಾಮ ಮಧ್ಯಸ್ಥ ಸ್ವಾಗತಿಸಿ, ನಿರೂಪಿಸಿದರು. ಸದಸ್ಯ ವಿಘ್ನೇಶ್ವರ ಜೋಯಿಸ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-28-1153991710</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಂದೂರು: ನೆಮ್ಮದಿಯ ಜೀವನಕ್ಕೆ ಆರೋಗ್ಯ ಮುಖ್ಯ. ಅದರಲ್ಲೂ ಕಣ್ಣಿನ ಸುರಕ್ಷತೆಯ ಬಗ್ಗೆ ಅಗತ್ಯ ಗಮನ ಹರಿಸಬೇಕು ಎಂದು ನಾವುಂದದ ಮರವಂತೆ- ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ ಪೂಜಾರಿ ಹಕ್ಕಾಡಿ ಹೇಳಿದರು.</p>.<p>ನಾವುಂದದ ಹಿಂದೂ ಅಭ್ಯುದಯ ಸಂಘ, ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ, ನಾವುಂದ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಶಿರೂರು- ಮುದ್ದುಮನೆ ಆಶ್ರಯದಲ್ಲಿ ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ನಡೆದ ಉಚಿತ ಕನ್ನಡಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಹಿಂದೂ ಅಭ್ಯುದಯ ಸಂಘವು ಕಣ್ಣಿನ ತಪಾಸಣೆಯ ಬಗ್ಗೆ ಒತ್ತು ನೀಡಿ, ಪ್ರತಿವರ್ಷ ಉಚಿತ ನೇತ್ರ ಚಿಕಿತ್ಸಾ ಶಿಬಿರ ಏರ್ಪಡಿಸುತ್ತಿದೆ. ಇದರಿಂದ ನೂರಾರು ಜನರಿಗೆ ಅನುಕೂಲ ಆಗುತ್ತಿದ್ದು, ಪ್ರಶಂಸನೀಯ ಕಾರ್ಯವಾಗಿದೆ ಎಂದರು.</p>.<p>ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸಹಕಾರದಲ್ಲಿ 74 ಜನರಿಗೆ ₹50 ಸಾವಿರ ಮೌಲ್ಯದ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು.</p>.<p>ಹಿಂದೂ ಅಭ್ಯುದಯ ಸಂಘದ ಎನ್. ಸಂಜೀವ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಮರವಂತೆ- ಬಡಾಕೆರೆ ವ್ಯವಸಾಯ ಸಂಘದ ನಿರ್ದೇಶಕ ರಾಮ ಕಂತಿಹೊಂಡ, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ನೇತ್ರ ತಪಾಸಕ ರವಿ, ಸುರೇಶ ಸುವರ್ಣ ಮತ್ತು ಜಿತೇಶ್ ಕೆ. ಪೂಜಾರಿ ಇದ್ದರು.</p>.<p>ಸಂಘದ ಕಾರ್ಯದರ್ಶಿ ಎ. ಶಿವರಾಮ ಮಧ್ಯಸ್ಥ ಸ್ವಾಗತಿಸಿ, ನಿರೂಪಿಸಿದರು. ಸದಸ್ಯ ವಿಘ್ನೇಶ್ವರ ಜೋಯಿಸ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-28-1153991710</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>