<p>ಬೈಂದೂರು: ಇಲ್ಲಿನ ಮಹತೋಭಾರ ಸೇನೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಏಪ್ರಿಲ್16ರಿಂದ 24ರ ತನಕ ಜರುಗಲಿದ್ದು, ಆ ಪ್ರಯುಕ್ತ ಗುರುವಾರ ಕೂಟಾಡಿ ರಾಮಕೃಷ್ಣ ಭಟ್ ಕಿರಿಮಂಜೇಶ್ವರ ಅವರ ಆಚಾರ್ಯತ್ವದಲ್ಲಿ ಧ್ವಜಾರೋಹಣ ನೆರವೇರಿತು.</p>.<p>ಬೆಳಿಗ್ಗೆ ದೇವಳದಲ್ಲಿ ಕಲಶ ಪ್ರತಿಷ್ಠೆ, ಕಂಕಣಧಾರಣೆಯ ನಂತರ ರುಜ್ಜು ಬಂಧನ ಮುಂತಾದ ಧಾರ್ಮಿಕ ವಿಧಾನಗಳು ನಡೆದವು.</p>.<p>ದೇವಳದ ಅರ್ಚಕರಾದ ಮಂಜುನಾಥ ಮಯ್ಯ, ನಾಗರಾಜ ಭಟ್, ರಾಜೇಶ ಐತಾಳ್ ಹಾಗೂ ಶಿವಾನಂದ ಅಡಿಗ ಇದ್ದರು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗಿರೀಶ ಬೈಂದೂರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ದೇವಳದ ಸಿಬ್ಬಂದಿ ಭಾಗವಹಿಸಿದ್ದರು.</p>.<p>ಪ್ರತಿದಿನ ಅಪ್ಪಿಕಟ್ಟೆ, ಬಿಯಾರಕಟ್ಟೆ, ಜಟ್ಕನಕಟ್ಟೆ, ನಾಕಟ್ಟೆ, ಪಡುವರಿಕಟ್ಟೆ, ಬಂಕೇಶ್ವರಕಟ್ಟೆ ಉತ್ಸವಗಳು ಜರುಗಲಿದ್ದು, ಮೇ 16ರಂದು ಸೇನೇಶ್ವರ ದೇವರ ಶ್ರೀಮನ್ಮಹಾರಥೋತ್ಸವ ಹಾಗೂ 23ರಂದು ಅವಭೃಥೋತ್ಸವ, 24ರಂದು ಸಂಜೆ ನಗರೋತ್ಸವ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-28-56065126</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಂದೂರು: ಇಲ್ಲಿನ ಮಹತೋಭಾರ ಸೇನೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಏಪ್ರಿಲ್16ರಿಂದ 24ರ ತನಕ ಜರುಗಲಿದ್ದು, ಆ ಪ್ರಯುಕ್ತ ಗುರುವಾರ ಕೂಟಾಡಿ ರಾಮಕೃಷ್ಣ ಭಟ್ ಕಿರಿಮಂಜೇಶ್ವರ ಅವರ ಆಚಾರ್ಯತ್ವದಲ್ಲಿ ಧ್ವಜಾರೋಹಣ ನೆರವೇರಿತು.</p>.<p>ಬೆಳಿಗ್ಗೆ ದೇವಳದಲ್ಲಿ ಕಲಶ ಪ್ರತಿಷ್ಠೆ, ಕಂಕಣಧಾರಣೆಯ ನಂತರ ರುಜ್ಜು ಬಂಧನ ಮುಂತಾದ ಧಾರ್ಮಿಕ ವಿಧಾನಗಳು ನಡೆದವು.</p>.<p>ದೇವಳದ ಅರ್ಚಕರಾದ ಮಂಜುನಾಥ ಮಯ್ಯ, ನಾಗರಾಜ ಭಟ್, ರಾಜೇಶ ಐತಾಳ್ ಹಾಗೂ ಶಿವಾನಂದ ಅಡಿಗ ಇದ್ದರು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗಿರೀಶ ಬೈಂದೂರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ದೇವಳದ ಸಿಬ್ಬಂದಿ ಭಾಗವಹಿಸಿದ್ದರು.</p>.<p>ಪ್ರತಿದಿನ ಅಪ್ಪಿಕಟ್ಟೆ, ಬಿಯಾರಕಟ್ಟೆ, ಜಟ್ಕನಕಟ್ಟೆ, ನಾಕಟ್ಟೆ, ಪಡುವರಿಕಟ್ಟೆ, ಬಂಕೇಶ್ವರಕಟ್ಟೆ ಉತ್ಸವಗಳು ಜರುಗಲಿದ್ದು, ಮೇ 16ರಂದು ಸೇನೇಶ್ವರ ದೇವರ ಶ್ರೀಮನ್ಮಹಾರಥೋತ್ಸವ ಹಾಗೂ 23ರಂದು ಅವಭೃಥೋತ್ಸವ, 24ರಂದು ಸಂಜೆ ನಗರೋತ್ಸವ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-28-56065126</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>