‘ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾವಣೆ ಮಾಡಲು’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳುತ್ತಾರೆ. ಸಂವಿಧಾನ ಬದಲಾವಣೆಯಾದರೆ ಬಡವರು, ಹಿಂದುಳಿದವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಬದುಕಲು ಸಾಧ್ಯವಿಲ್ಲ. ಮತ್ತೆ ಮನುಸ್ಮೃತಿ ಜಾರಿಗೆ ಬರಲಿದೆ. ಜಾತಿ ವ್ಯವಸ್ಥೆ, ಅಸಮಾನತೆ ಅನುಭವಿಸಬೇಕಾಗುತ್ತದೆ. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಉಳಿಯಬೇಕಾದರೆ ಸಂವಿಧಾನ ಉಳಿಯಲೇಬೇಕು ಎಂದರು.