<p><strong>ಉಡುಪಿ: </strong>ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ ಜಿಲ್ಲಾ ರಸ್ತೆ ಸುರಕ್ಷತಾ ಕ್ರಿಯಾ ಯೋಜನೆಯನ್ನು ಶೀಘ್ರ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯಾ ಯೋಜನೆಯಂತೆ ಸಾರಿಗೆ, ಪೊಲೀಸ್, ಆರೋಗ್ಯ, ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ , ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಮತ್ತು ನಗರಸಭೆಯಿಂದ ಕ್ರಿಯಾ ಯೋಜನೆ ಸಿದ್ಧಪಡಿಸಿ, ಅಂದಾಜು ವೆಚ್ಚದ ವಿವರವನ್ನು ವಾರದಲ್ಲಿ ಸಲ್ಲಿಸಬೇಕು ಎಂದರು.</p>.<p>ಉಡುಪಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದ ಡಿಸಿ, ನಗರದಲ್ಲಿ ಝೀಬ್ರಾ ಕ್ರಾಸ್ ಹಾಗೂ ವೈಜ್ಞಾನಿಕ ರೀತಿಯಲ್ಲಿ ಹಂಪ್ಗಳನ್ನು ಅಳವಡಿಸಬೇಕು ಎಂದರು.</p>.<p>ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಮಾಣ ಹೆಚ್ಚಾಗಿದ್ದು, ಕಳೆದ ವರ್ಷ 260 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ರಸ್ತೆ ಸುರಕ್ಷತಾ ನಿಯಮಗಳಂತೆ ಅಪಘಾತ ಪ್ರಮಾಣ ಶೇ 10ಕ್ಕಿಂತ ಕಡಿಮೆ ಇರುವಂತೆ ಕ್ರಮ ಕೈಗೊಳ್ಳಬೇಕಿದ್ದು ಹೆದ್ದಾರಿಯಲ್ಲಿನ ಬ್ಲಾಕ್ ಸ್ಪಾಟ್ಗಳಲ್ಲಿ ಅಗತ್ಯ ಕಾಮಗಾರಿ ಕೈಗೊಳ್ಳಬೇಕು ಎಂದರು.</p>.<p>ಬ್ಲಾಕ್ ಸ್ಪಾಟ್ಗಳಲ್ಲಿ ಕಾಮಗಾರಿ ಕೈಗೊಳ್ಳುವ ಕುರಿತ ಅನುಮೋದನೆಗೆ ಪ್ರಸ್ತಾವ ಕಳುಹಿಸಲಾಗಿದ್ದು, ಅನುಮತಿ ಸಿಕ್ಕಬಳಿಕ ಕಾಮಗಾರಿ ನಡೆಸಲಾಗುವುದು ಎಂದು ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕರು ತಿಳಿಸಿದರು.</p>.<p>ಇಂದ್ರಾಳಿಯಿಂದ ಟೈಗರ್ ಸರ್ಕಲ್ವರೆಗೆ ರಸ್ತೆ ವಿಭಜಕ ಇಲ್ಲದಿರುವುದರಿಂದ ರಸ್ತೆಯ ಎರಡೂ ಬದಿ ವಾಸವಿರುವ ನಿವಾಸಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಹೆಚ್ಚು ದೂರುಗಳು ಬರುತ್ತಿದ್ದು, ಲಕ್ಷ್ಮೀಂದ್ರ ನಗರ ಅಥವಾ ಅದಕ್ಕಿಂತ ಸ್ವಲ್ಪ ಮುಂದೆ ರಸ್ತೆ ವಿಭಜಕ ನಿರ್ಮಿಸುವ ಅಗತ್ಯವಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದರು.</p>.<p>ಈ ಬಗ್ಗೆ ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ 169 ‘ಎ’ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.</p>.<p>ಗುಂಡಿಬೈಲು–ದೊಡ್ಡಣಗುಡ್ಡೆ ರಸ್ತೆಯಲ್ಲಿ ಹಂಪ್ಸ್ ಅಳವಡಿಕೆ, ಅಜ್ಜರಕಾಡಿನ ಲಾಲ್ ಬಹದ್ದೂರ್ ಶಾಸ್ತ್ರಿ ಜಂಕ್ಷನ್ ಸಂಧಿಸುವ ರಸ್ತೆಯಲ್ಲಿ 4 ಕಡೆ ಹಂಪ್ಸ್ ಅಳವಡಿಕೆ, ಕರಂಬಳ್ಳಿ ನೇಕಾರರ ಕಾಲೊನಿ ಬಸ್ ನಿಲ್ದಾಣದ ಬಳಿ ಹೊಸ ರಿಕ್ಷಾ ನಿಲ್ದಾಣಕ್ಕೆ ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ ಜಿಲ್ಲಾ ರಸ್ತೆ ಸುರಕ್ಷತಾ ಕ್ರಿಯಾ ಯೋಜನೆಯನ್ನು ಶೀಘ್ರ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯಾ ಯೋಜನೆಯಂತೆ ಸಾರಿಗೆ, ಪೊಲೀಸ್, ಆರೋಗ್ಯ, ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ , ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಮತ್ತು ನಗರಸಭೆಯಿಂದ ಕ್ರಿಯಾ ಯೋಜನೆ ಸಿದ್ಧಪಡಿಸಿ, ಅಂದಾಜು ವೆಚ್ಚದ ವಿವರವನ್ನು ವಾರದಲ್ಲಿ ಸಲ್ಲಿಸಬೇಕು ಎಂದರು.</p>.<p>ಉಡುಪಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದ ಡಿಸಿ, ನಗರದಲ್ಲಿ ಝೀಬ್ರಾ ಕ್ರಾಸ್ ಹಾಗೂ ವೈಜ್ಞಾನಿಕ ರೀತಿಯಲ್ಲಿ ಹಂಪ್ಗಳನ್ನು ಅಳವಡಿಸಬೇಕು ಎಂದರು.</p>.<p>ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಮಾಣ ಹೆಚ್ಚಾಗಿದ್ದು, ಕಳೆದ ವರ್ಷ 260 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ರಸ್ತೆ ಸುರಕ್ಷತಾ ನಿಯಮಗಳಂತೆ ಅಪಘಾತ ಪ್ರಮಾಣ ಶೇ 10ಕ್ಕಿಂತ ಕಡಿಮೆ ಇರುವಂತೆ ಕ್ರಮ ಕೈಗೊಳ್ಳಬೇಕಿದ್ದು ಹೆದ್ದಾರಿಯಲ್ಲಿನ ಬ್ಲಾಕ್ ಸ್ಪಾಟ್ಗಳಲ್ಲಿ ಅಗತ್ಯ ಕಾಮಗಾರಿ ಕೈಗೊಳ್ಳಬೇಕು ಎಂದರು.</p>.<p>ಬ್ಲಾಕ್ ಸ್ಪಾಟ್ಗಳಲ್ಲಿ ಕಾಮಗಾರಿ ಕೈಗೊಳ್ಳುವ ಕುರಿತ ಅನುಮೋದನೆಗೆ ಪ್ರಸ್ತಾವ ಕಳುಹಿಸಲಾಗಿದ್ದು, ಅನುಮತಿ ಸಿಕ್ಕಬಳಿಕ ಕಾಮಗಾರಿ ನಡೆಸಲಾಗುವುದು ಎಂದು ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕರು ತಿಳಿಸಿದರು.</p>.<p>ಇಂದ್ರಾಳಿಯಿಂದ ಟೈಗರ್ ಸರ್ಕಲ್ವರೆಗೆ ರಸ್ತೆ ವಿಭಜಕ ಇಲ್ಲದಿರುವುದರಿಂದ ರಸ್ತೆಯ ಎರಡೂ ಬದಿ ವಾಸವಿರುವ ನಿವಾಸಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಹೆಚ್ಚು ದೂರುಗಳು ಬರುತ್ತಿದ್ದು, ಲಕ್ಷ್ಮೀಂದ್ರ ನಗರ ಅಥವಾ ಅದಕ್ಕಿಂತ ಸ್ವಲ್ಪ ಮುಂದೆ ರಸ್ತೆ ವಿಭಜಕ ನಿರ್ಮಿಸುವ ಅಗತ್ಯವಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದರು.</p>.<p>ಈ ಬಗ್ಗೆ ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ 169 ‘ಎ’ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.</p>.<p>ಗುಂಡಿಬೈಲು–ದೊಡ್ಡಣಗುಡ್ಡೆ ರಸ್ತೆಯಲ್ಲಿ ಹಂಪ್ಸ್ ಅಳವಡಿಕೆ, ಅಜ್ಜರಕಾಡಿನ ಲಾಲ್ ಬಹದ್ದೂರ್ ಶಾಸ್ತ್ರಿ ಜಂಕ್ಷನ್ ಸಂಧಿಸುವ ರಸ್ತೆಯಲ್ಲಿ 4 ಕಡೆ ಹಂಪ್ಸ್ ಅಳವಡಿಕೆ, ಕರಂಬಳ್ಳಿ ನೇಕಾರರ ಕಾಲೊನಿ ಬಸ್ ನಿಲ್ದಾಣದ ಬಳಿ ಹೊಸ ರಿಕ್ಷಾ ನಿಲ್ದಾಣಕ್ಕೆ ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>