‘ವಿದ್ಯಾರ್ಥಿಗಳಿದ್ದರೆ ಶಿಕ್ಷಕರಿಲ್ಲ. ಶಿಕ್ಷಕರಿದ್ದರೆ ವಿದ್ಯಾರ್ಥಿಗಳಿಲ್ಲ. ಇಬ್ಬರೂ ಇರುವ ಶಾಲೆಗಳಲ್ಲಿ ಕೊಠಡಿಗಳಿಲ್ಲ. ಇಂಥ ದುಃಸ್ಥಿತಿ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿದೆ. ಯಾವ ಸರ್ಕಾರವೂ ಈ ಬಗ್ಗೆ ಗಂಭೀರವಾದ ಚಿಂತನೆ ಮಾಡುತ್ತಿಲ್ಲ. ಇಂಥ ಶಾಲೆಗಳಲ್ಲಿ ಓದುವವರೆಲ್ಲ ಬಡ, ಮಧ್ಯಮ, ಅಲೆಮಾರಿ ಮತ್ತು ಕೂಲಿಕಾರ್ಮಿಕರ ಮಕ್ಕಳು. ಹೀಗಾಗಿ, ಸರ್ಕಾರಿ ಶಾಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.