<p><strong>ಹೆಬ್ರಿ</strong>: ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆಯಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಅವಕಾಶಗಳಿವೆ.</p>.<p>2014ರಲ್ಲಿ ಪ್ರಾರಂಭವಾದ ಕಾಲೇಜು, 2019–20ರ ಶೈಕ್ಷಣಿಕ ವರ್ಷದಲ್ಲಿ ಹೆಬ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಮುನಿಯಾಲು ಚಟ್ಕಲ್ಪಾದೆಯಲ್ಲಿ 4.6 ಎಕರೆ ವಿಸ್ತೀರ್ಣದ ಸುಂದರ ಪರಿಸರದ ನಡುವಿನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ವಿಶಾಲವಾದ ಕ್ರೀಡಾಂಗಣದ ಸೌಲಭ್ಯವೂ ಇದೆ.</p>.<p>ಬಿ.ಎ.ಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರ ವಿಷಯಗಳನ್ನು ಅಧ್ಯಯನ ಮಾಡಲು ಅವಕಾಶವಿದೆ. ಬಿ.ಕಾಂ. ಪದವಿಗೆ ಮಂಗಳೂರು ವಿಶ್ವವಿದ್ಯಾನಿಲಯ ನಿಗದಿ ಪಡಿಸಿದ ಪಠ್ಯಕ್ರಮದಲ್ಲಿ ಬೋಧನೆ ನಡೆಯುತ್ತದೆ.</p>.<p>ಸರ್ಕಾರ ಮತ್ತು ಇತರ ಸೇವಾ ಸಂಸ್ಥೆಗಳು, ಕಾರ್ಪೋರೆಟ್ ಕಂಪನಿಗಳು ನೀಡುವ ವಿದ್ಯಾರ್ಥಿವೇತನ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶವಿದೆ. 10 ವರ್ಷಗಳಲ್ಲಿ ಕಾಲೇಜು ಗಮನಾರ್ಹ ಸಾಧನೆ ಮಾಡಿದೆ.</p>.<p>ಪದವಿ ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್ ಘಟಕಗಳೂ ಕಾಲೇಜಿನಲ್ಲಿವೆ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನವನ್ನೂ ನೀಡಲಾಗುತ್ತಿದೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಕೌಶಲಾಧಾರಿತ ಮಾರ್ಗದರ್ಶನ ನೀಡಲಾಗುತ್ತದೆ.</p>.<p>ನುರಿತ ಬೋಧಕ ಮತ್ತು ಬೋಧಕೇತರ ವೃಂದವನ್ನು ಸಂಸ್ಥೆಯು ಹೊಂದಿದೆ. ಸುಸಜ್ಜಿತ ‘ಇ’ ಗ್ರಂಥಾಲಯ ಇರುವುದು ಸಂಸ್ಥೆಯ ವಿಶೇಷತೆಯಾಗಿದೆ. ಕಂಪ್ಯೂಟರ್ ಬೇಸಿಕ್, ಸ್ಪೋಕನ್ ಇಂಗ್ಲಿಷ್ ಉಚಿತ ತರಬೇತಿ ಪಡೆಯುವ ಅವಕಾಶವೂ ವಿದ್ಯಾರ್ಥಿಗಳಿಗಿದೆ.</p>.<p>ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಎಫ್ಡಿಎ, ಎಸ್ಡಿಎ, ಬ್ಯಾಂಕಿಂಗ್, ಪೊಲೀಸ್, ಕೆಎಎಸ್, ಐಎಎಸ್, ಐಎಫ್ಎಸ್, ಐಪಿಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.</p>.<p>ಸಂಶೋಧನೆ ನಡೆಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಸಂಸ್ಥೆಯು ಉತ್ತಮ ಫಲಿತಾಂಶವನ್ನು ನಿರಂತರವಾಗಿ ದಾಖಲಿಸುತ್ತಿದೆ ಎನ್ನುತ್ತಾರೆ ಪ್ರಾಂಶುಪಾಲ ಮಂಜುನಾಥ ಆಚಾರ್.</p>.<p><strong>ವಿದ್ಯಾರ್ಥಿ ನಿಲಯದ ಅಗತ್ಯವಿದೆ:</strong> ಅತ್ಯಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ಸಂಸ್ಥೆಗೆ ಬರುತ್ತಾರೆ. ಕಾಲೇಜು ಸಮೀಪದಲ್ಲೇ ಹಾಸ್ಟೆಲ್ ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪೋಷಕರು ಆಗ್ರಹಿಸಿದ್ದಾರೆ.</p>.<p>2022-23ನೇ ಸಾಲಿನಲ್ಲಿ ಯುಜಿಸಿಯ ನ್ಯಾಕ್ ಮೌಲ್ಯಮಾಪನದಲ್ಲಿ ‘ಬಿ’ ಶ್ರೇಯಾಂಕ ಕ್ರೀಡಾ ಚಟುವಟಿಕೆಗಳಿಗೆ ವಿಶಾಲವಾದ ಕ್ರೀಡಾಂಗಣ ಸೌಲಭ್ಯ ಹಳ್ಳಿಯ ಪರಿಸರ, ಕಲಿಕೆಗೆ ಪೂರಕ ವಾತಾವರಣ</p>.<p><strong>ನಮ್ಮ ಕಾಲೇಜಿನಲ್ಲಿ ಉನ್ನತ ಶಿಕ್ಷಣಕ್ಕೆ ಅಗತ್ಯವಾದ ಎಲ್ಲಾ ವ್ಯವಸ್ಥೆ ಇದೆ. ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮೂರಲ್ಲೇ ಪದವಿ ಪಡೆಯುವ ಸುವರ್ಣಾವಕಾಶವಿದೆ.</strong></p><p><strong>- ಪಾಲಕರು ಕೂಡ ಶಿಕ್ಷಣದ ಮಹತ್ವ ಅರಿತು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಮಂಜುನಾಥ ಆಚಾರ್ ಪ್ರಾಂಶುಪಾಲ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ</strong>: ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆಯಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಅವಕಾಶಗಳಿವೆ.</p>.<p>2014ರಲ್ಲಿ ಪ್ರಾರಂಭವಾದ ಕಾಲೇಜು, 2019–20ರ ಶೈಕ್ಷಣಿಕ ವರ್ಷದಲ್ಲಿ ಹೆಬ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಮುನಿಯಾಲು ಚಟ್ಕಲ್ಪಾದೆಯಲ್ಲಿ 4.6 ಎಕರೆ ವಿಸ್ತೀರ್ಣದ ಸುಂದರ ಪರಿಸರದ ನಡುವಿನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ವಿಶಾಲವಾದ ಕ್ರೀಡಾಂಗಣದ ಸೌಲಭ್ಯವೂ ಇದೆ.</p>.<p>ಬಿ.ಎ.ಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರ ವಿಷಯಗಳನ್ನು ಅಧ್ಯಯನ ಮಾಡಲು ಅವಕಾಶವಿದೆ. ಬಿ.ಕಾಂ. ಪದವಿಗೆ ಮಂಗಳೂರು ವಿಶ್ವವಿದ್ಯಾನಿಲಯ ನಿಗದಿ ಪಡಿಸಿದ ಪಠ್ಯಕ್ರಮದಲ್ಲಿ ಬೋಧನೆ ನಡೆಯುತ್ತದೆ.</p>.<p>ಸರ್ಕಾರ ಮತ್ತು ಇತರ ಸೇವಾ ಸಂಸ್ಥೆಗಳು, ಕಾರ್ಪೋರೆಟ್ ಕಂಪನಿಗಳು ನೀಡುವ ವಿದ್ಯಾರ್ಥಿವೇತನ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶವಿದೆ. 10 ವರ್ಷಗಳಲ್ಲಿ ಕಾಲೇಜು ಗಮನಾರ್ಹ ಸಾಧನೆ ಮಾಡಿದೆ.</p>.<p>ಪದವಿ ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್ ಘಟಕಗಳೂ ಕಾಲೇಜಿನಲ್ಲಿವೆ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನವನ್ನೂ ನೀಡಲಾಗುತ್ತಿದೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಕೌಶಲಾಧಾರಿತ ಮಾರ್ಗದರ್ಶನ ನೀಡಲಾಗುತ್ತದೆ.</p>.<p>ನುರಿತ ಬೋಧಕ ಮತ್ತು ಬೋಧಕೇತರ ವೃಂದವನ್ನು ಸಂಸ್ಥೆಯು ಹೊಂದಿದೆ. ಸುಸಜ್ಜಿತ ‘ಇ’ ಗ್ರಂಥಾಲಯ ಇರುವುದು ಸಂಸ್ಥೆಯ ವಿಶೇಷತೆಯಾಗಿದೆ. ಕಂಪ್ಯೂಟರ್ ಬೇಸಿಕ್, ಸ್ಪೋಕನ್ ಇಂಗ್ಲಿಷ್ ಉಚಿತ ತರಬೇತಿ ಪಡೆಯುವ ಅವಕಾಶವೂ ವಿದ್ಯಾರ್ಥಿಗಳಿಗಿದೆ.</p>.<p>ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಎಫ್ಡಿಎ, ಎಸ್ಡಿಎ, ಬ್ಯಾಂಕಿಂಗ್, ಪೊಲೀಸ್, ಕೆಎಎಸ್, ಐಎಎಸ್, ಐಎಫ್ಎಸ್, ಐಪಿಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.</p>.<p>ಸಂಶೋಧನೆ ನಡೆಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಸಂಸ್ಥೆಯು ಉತ್ತಮ ಫಲಿತಾಂಶವನ್ನು ನಿರಂತರವಾಗಿ ದಾಖಲಿಸುತ್ತಿದೆ ಎನ್ನುತ್ತಾರೆ ಪ್ರಾಂಶುಪಾಲ ಮಂಜುನಾಥ ಆಚಾರ್.</p>.<p><strong>ವಿದ್ಯಾರ್ಥಿ ನಿಲಯದ ಅಗತ್ಯವಿದೆ:</strong> ಅತ್ಯಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ಸಂಸ್ಥೆಗೆ ಬರುತ್ತಾರೆ. ಕಾಲೇಜು ಸಮೀಪದಲ್ಲೇ ಹಾಸ್ಟೆಲ್ ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪೋಷಕರು ಆಗ್ರಹಿಸಿದ್ದಾರೆ.</p>.<p>2022-23ನೇ ಸಾಲಿನಲ್ಲಿ ಯುಜಿಸಿಯ ನ್ಯಾಕ್ ಮೌಲ್ಯಮಾಪನದಲ್ಲಿ ‘ಬಿ’ ಶ್ರೇಯಾಂಕ ಕ್ರೀಡಾ ಚಟುವಟಿಕೆಗಳಿಗೆ ವಿಶಾಲವಾದ ಕ್ರೀಡಾಂಗಣ ಸೌಲಭ್ಯ ಹಳ್ಳಿಯ ಪರಿಸರ, ಕಲಿಕೆಗೆ ಪೂರಕ ವಾತಾವರಣ</p>.<p><strong>ನಮ್ಮ ಕಾಲೇಜಿನಲ್ಲಿ ಉನ್ನತ ಶಿಕ್ಷಣಕ್ಕೆ ಅಗತ್ಯವಾದ ಎಲ್ಲಾ ವ್ಯವಸ್ಥೆ ಇದೆ. ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮೂರಲ್ಲೇ ಪದವಿ ಪಡೆಯುವ ಸುವರ್ಣಾವಕಾಶವಿದೆ.</strong></p><p><strong>- ಪಾಲಕರು ಕೂಡ ಶಿಕ್ಷಣದ ಮಹತ್ವ ಅರಿತು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಮಂಜುನಾಥ ಆಚಾರ್ ಪ್ರಾಂಶುಪಾಲ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>