ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ಸಹ ಖಜಾಂಚಿಯಾಗಿ ಕೆ.ರಾಘವೇಂದ್ರ ನಾಯರಿ ನೇಮಕ

Last Updated 21 ನವೆಂಬರ್ 2022, 16:26 IST
ಅಕ್ಷರ ಗಾತ್ರ

ಉಡುಪಿ: ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಅಖಿಲ ಭಾರತ ಸಹ ಖಜಾಂಚಿಯಾಗಿ ಕೆ.ರಾಘವೇಂದ್ರ ನಾಯರಿ ನೇಮಕವಾಗಿದ್ದಾರೆ.

ನ.16 ಹಾಗೂ 17ರಂದು ಕೇರಳದ ಎರ್ನಾಕುಲಂನಲ್ಲಿ ನಡೆದ ಯೂನಿಯನ್‌ನ ಕೇಂದ್ರ ಸಮಿತಿ ಸಭೆಯಲ್ಲಿ ರಾಘವೇಂದ್ರ ನಾಯರಿ ಅವರ ನೇಮಕ ಮಾಡಲಾಗಿದೆ. ಈಚೆಗೆ ಕರ್ನಾಟಕ ಪ್ರದೇಶ ಗ್ರಾಮೀಣ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‌‌ನ ಅಧ್ಯಕ್ಷರಾಗಿಯೂ ನಾಯರಿ ನೇಮಕವಾಗಿದ್ದರು ಎಂದ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ರಾಜ್ಯ ಸಮಿತಿ ಸದಸ್ಯ ಕೆ.ರಮೇಶ್ ತಿಳಿಸಿದ್ದಾರೆ.

ರಾಘವೇಂದ್ರ ನಾಯರಿ ಉಡುಪಿ ಜಿಲ್ಲೆಯ ಸಾಲಿಗ್ರಾಮದವರು. ಪ್ರಸ್ತುತ ದಾವಣಗೆರೆ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ. ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿಯಾಗಿ, ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಹ ಕಾರ್ಯದರ್ಶಿಯಾಗಿ ಹಾಗೂ ಅಸಂಘಟಿತ ಕಾರ್ಮಿಕ ವಲಯದ ಮುಖಂಡರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT