ಉಡುಪಿ: ಈಚೆಗೆ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮಣಿಪಾಲದ ಕಸ್ತೂರಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕಸ್ತೂರಬಾ ಆಸ್ಪತ್ರೆ, ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ, ಭಾರತೀಯ ವೈದ್ಯಕೀಯ ಸಂಘದಿಂದ ಸೋಮವಾರ ರಾತ್ರಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಯಿತು.
ಮಣಿಪಾಲದ ಡಾ.ಟಿಎಂಎ ಪೈ ಹಾಲ್ನಿಂದ ಕಸ್ತೂರಬಾ ಆಸ್ಪತ್ರೆಯವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವೈದ್ಯರು, ಹಲ್ಲೆಯನ್ನು ಖಂಡಿಸಿದರು.
ಮಹಾವಿದ್ಯಾಲಯ ಡೀನ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್, ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.