ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಂಬತ್ತಿ ಹಿಡಿದು ವೈದ್ಯರ ಪ್ರತಿಭಟನೆ

ವೈದ್ಯರ ಮೇಲಿನ ಹಲ್ಲೆಗೆ ಖಂಡನೆ; ಪ್ರತಿಭಟನಾ ಮೆರವಣಿಗೆ
Last Updated 17 ಜೂನ್ 2019, 16:13 IST
ಅಕ್ಷರ ಗಾತ್ರ

ಉಡುಪಿ: ಈಚೆಗೆ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮಣಿಪಾಲದ ಕಸ್ತೂರಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕಸ್ತೂರಬಾ ಆಸ್ಪತ್ರೆ, ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ, ಭಾರತೀಯ ವೈದ್ಯಕೀಯ ಸಂಘದಿಂದ ಸೋಮವಾರ ರಾತ್ರಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಯಿತು.

ಮಣಿಪಾಲದ ಡಾ.ಟಿಎಂಎ ಪೈ ಹಾಲ್‌ನಿಂದ ಕಸ್ತೂರಬಾ ಆಸ್ಪತ್ರೆಯವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವೈದ್ಯರು, ಹಲ್ಲೆಯನ್ನು ಖಂಡಿಸಿದರು.

ಮಹಾವಿದ್ಯಾಲಯ ಡೀನ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್, ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT