ಮಂಗಳವಾರ ಸಂಜೆ ಕೋಡಿಬೆಂಗ್ರೆಯಿಂದ ಗುಜ್ಜರಬೆಟ್ಟುವರೆಗೆ ಶಾಸಕರು ಪಾದಯಾತ್ರೆ ನಡೆಸಿದ್ದರು. ಇದಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆದಿರಲಿಲ್ಲ. ಜತೆಗೆ, ಪಾದಯಾತ್ರೆಯಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿತ್ತು. ಈ ಸಂಬಂಧ ಚುನಾವಣಾ ಸೆಕ್ಟರ್ ಅಧಿಕಾರಿ ಮೋಹನ್ ರಾಜ್ ಅವರು ದೂರು ನೀಡಿದ್ದರು. ದೂರಿನ ಮೇರೆಗೆ ಅಕ್ರಮಕೂಟ, ಬಾಲಕಾರ್ಮಿಕ ಕಾಯ್ದೆ ಉಲ್ಲಂಘನೆ ಕಾಯ್ದೆಯಡಿ ರಘುಪತಿ ಭಟ್ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ.