ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಮತಿ ಪಡೆಯದೆ ಪಾದಯಾತ್ರೆ, ಮಕ್ಕಳ ಬಳಕೆ: ಶಾಸಕ ರಘುಪತಿ ಭಟ್ ವಿರುದ್ಧ ಪ್ರಕರಣ

Last Updated 17 ಏಪ್ರಿಲ್ 2019, 14:13 IST
ಅಕ್ಷರ ಗಾತ್ರ

ಉಡುಪಿ: ಅನುಮತಿ ಪಡೆಯದೆ ಪಾದಯಾತ್ರೆ ನಡೆಸಿದ ಹಾಗೂ ಪಾದಯಾತ್ರೆಗೆ ಮಕ್ಕಳನ್ನು ಬಳಸಿಕೊಂಡ ಆರೋಪದಡಿ ಶಾಸಕ ಕೆ.ರಘುಪತಿ ಭಟ್ ವಿರುದ್ಧ ಬುಧವಾರ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ಸಂಜೆ ಕೋಡಿಬೆಂಗ್ರೆಯಿಂದ ಗುಜ್ಜರಬೆಟ್ಟುವರೆಗೆ ಶಾಸಕರು ಪಾದಯಾತ್ರೆ ನಡೆಸಿದ್ದರು. ಇದಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆದಿರಲಿಲ್ಲ. ಜತೆಗೆ, ಪಾದಯಾತ್ರೆಯಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿತ್ತು. ಈ ಸಂಬಂಧ ಚುನಾವಣಾ ಸೆಕ್ಟರ್ ಅಧಿಕಾರಿ ಮೋಹನ್ ರಾಜ್ ಅವರು ದೂರು ನೀಡಿದ್ದರು. ದೂರಿನ ಮೇರೆಗೆ ಅಕ್ರಮಕೂಟ, ಬಾಲಕಾರ್ಮಿಕ ಕಾಯ್ದೆ ಉಲ್ಲಂಘನೆ ಕಾಯ್ದೆಯಡಿ ರಘುಪತಿ ಭಟ್ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT