ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ

Last Updated 17 ಏಪ್ರಿಲ್ 2019, 19:35 IST
ಅಕ್ಷರ ಗಾತ್ರ

ಉಡುಪಿ: ಶ್ರೀರಾಮ ನವಮಿಯ ದಿನ ಶುಭಾಶಯ ಕೋರಿದ ಟ್ವಿಟ್ಟರ್ ಸಂದೇಶದಲ್ಲಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ತಂದ ಆರೋಪದ ಮೇಲೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

ಶೋಭಾ ಅವರ ಟ್ವಿಟ್ಟರ್ ಖಾತೆಯಿಂದ ಏ.13ರಂದು ಪ್ರಕಟವಾದ ಚಿತ್ರದಲ್ಲಿ, ಶ್ರೀರಾಮನ ಬಿಲ್ಲಿನ ಮೇಲೆ ಮೋದಿಯ ಭಾವಚಿತ್ರವಿದ್ದು, ರಾವಣನ ದಶಮುಖಗಳ ಜಾಗದಲ್ಲಿ ವಿರೋಧ ಪಕ್ಷಗಳ ಮುಖಂಡರ ಚಿತ್ರಗಳಿದ್ದು, ಅದಕ್ಕೆ ಬಿಲ್ಲಿನಿಂದ ಗುರಿ ಮಾಡಲಾಗಿದೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದುಫ್ಲೈಯಿಂಗ್ ಸ್ಕ್ವಾಡ್‌ ಅಧಿಕಾರಿ ಕೆ.ವಿ.ನಾಗರಾಜ್ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT