ಸೋಮವಾರ ಪ್ರೆಸ್ಕ್ಲಬ್ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಈಚೆಗಷ್ಟೆ ಸರ್ಕಾರಕ್ಕೆ ಸಲ್ಲಿಸಿದೆ. ಸರ್ಕಾರ ಸಚಿವ ಸಂಪುಟದ ಮುಂದಿಟ್ಟ ಬಳಿಕ ವರದಿಯಲ್ಲಿರುವ ಸರಿ–ತಪ್ಪುಗಳ ಬಗ್ಗೆ ಚರ್ಚೆ ನಡೆಯಬೇಕು. ವರದಿ ಬಹಿರಂಗವಾಗದೆ, ಅದರೊಳಗಿರುವ ಅಂಶಗಳನ್ನು ತಿಳಿಯದೆ ಮಾತನಾಡುವುದು ಸರಿಯಲ್ಲ ಎಂದರು.