ಕಾರ್ಯಕ್ರಮದಲ್ಲಿ ಬೆಂಗಳೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ ಹಾಗೂ ಬ್ರಹ್ಮಾವರದ ಬಂಟರ ಸಂಘದ ಅಧ್ಯಕ್ಷರಾದ ಎಂ.ಮುರಳೀಧರ ಹೆಗ್ಡೆ, ಸುಗ್ಗಿ ಸುಧಾಕರ ಶೆಟ್ಟಿ, ವಿಜಯ ಶೆಟ್ಟಿ ಹಾಗೂ ಎಂ.ಸುಧಾಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಂಬಳ ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿ, ಕ್ರೀಡಾ ರತ್ನ ಪ್ರಶಸ್ತಿ ವಿಜೇತರಾದ ಗೋಪಾಲ ನಾಯ್ಕ ಶಿರೂರು ಅವರನ್ನು ಗೌರವಿಸಲಾಯಿತು. ಬೈಂದೂರು ಕಂಬಳ ಸಮಿತಿಯ ಅಧ್ಯಕ್ಷ ವೆಂಕಟ ಪೂಜಾರಿ, ಬಾರ್ಕೂರು ನಡುಮನೆ ಕುಟುಂಬಸ್ಥರು ಭಾಗವಹಿಸಿದ್ದರು.