<p><strong>ಉಡುಪಿ:</strong> ಪಟ್ಲದ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ಈಚೆಗೆಯುವ ನಿರ್ದೇಶಕ, ನಟ ಸಂತೋಷ್ ನಾಯಕ್ ಪಟ್ಲ ಅವರಿಗೆ ಪ್ರತಿಷ್ಠಿತ ಸಿಜಿಕೆ ರಂಗ ಪ್ರಶಸ್ತಿ ಪ್ರಧಾನ ಮಾಡಲಾಯಿತು.</p>.<p>ನಮ್ಮ ತುಳುವೆರ್ ಕಲಾ ಸಂಘಟನೆ ಮುದ್ರಾಡಿ, ಸಂಸ ಥಿಯೇಟರ್ ಬೆಂಗಳೂರು ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್, ನಾಟಕವನ್ನು ಪಂಥಗಳಾಗಿ ವಿಂಗಡಿಸಿ ನೋಡುವ ಬದಲು, ನಾಟಕದಲ್ಲಿ ಜೀವಪರತೆಕಾಣಬೇಕು. ರಂಗ ನಿರ್ದೇಶಕನಿಗೆ ರಂಗದ ಬದ್ಧತೆ ಜೊತೆಗೆ ಸಾಮಾಜಿಕ ಬದ್ಧತೆ ಇರಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಗ್ರಾಮೀಣ ಭಾಗದಲ್ಲಿ ತಯಾರಾಗುವ ನಾಟಕಗಳನ್ನು ನಗರ ಪ್ರದೇಶದಲ್ಲಿ ಪ್ರದರ್ಶಿಸುವುದು ಮುಖ್ಯವಲ್ಲ. ಗ್ರಾಮೀಣ ಭಾಗಗಳಲ್ಲೇನಾಟಕೋತ್ಸವಗಳು ನಡೆಯಬೇಕು. ಸಂತೋಷ್ ನಾಯಕ್ ಪಟ್ಲ ಅದನ್ನು ಬದ್ಧತೆಯಿಂದ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.</p>.<p>ಪ್ರಶಸ್ತಿ ಪ್ರದಾನ ಮಾಡಿದ ಹಿರಿಯ ರಂಗಕರ್ಮಿ ಐ.ಕೆ ಬೊಳುವಾರು ಮಾತನಾಡಿ, ‘ಸಿಜಿಕೆ ರಂಗ ಜಾಣ್ಮೆಯ ಮೂಲಕಬೀದಿನಾಟಕಗಳಿಗೆ ಹೊಸರೂಪವನ್ನು ಕೊಟ್ಟಿದ್ದಾರೆ. ಸಿಜಿಕೆಯ ಜೊತೆ ದುಡಿದವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಾಟಕವನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದರು.</p>.<p>ಕಾರ್ಯಕ್ರಮದಲ್ಲಿ ಪತ್ರಕರ್ತ ಶಶಿಧರ್ ಮಾಸ್ತಿಬೈಲು, ಪಟ್ಲ ಯು.ಎಸ್ ನಾಯಕ್ ಪ್ರೌಢಶಾಲೆಯ ಸಂಚಾಲಕ ಅಣ್ಣಯ್ಯ ನಾಯಕ್ ಪಟ್ಲ, ನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ್ ನಾಯಕ್ ಪಟ್ಲ, ಮುಖ್ಯೋಪಾಧ್ಯಾಯ ಶ್ರೀಕಾಂತ ಪ್ರಭು, ಶಿಕ್ಷಕ ಎಚ್.ಎನ್ ನಟರಾಜ್, ಉಪಸ್ಥಿತರಿದ್ದರು.</p>.<p>ನಮ್ಮ ತುಳುವೆರ್ ಸಂಘಟನೆ ಅಧ್ಯಕ್ಷ ಸುಕುಮಾರ್ ಮೋಹನ್ ಸ್ವಾಗತಿಸಿದರು. ಭೂಮಿಗೀತ ಸಂಘಟನೆ ಅಧ್ಯಕ್ಷ ಸುಧೀರ್ ಕುಮಾರ್ ಪಟ್ಲ ವಂದಿಸಿದರು. ನಾಗೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಪಟ್ಲದ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ಈಚೆಗೆಯುವ ನಿರ್ದೇಶಕ, ನಟ ಸಂತೋಷ್ ನಾಯಕ್ ಪಟ್ಲ ಅವರಿಗೆ ಪ್ರತಿಷ್ಠಿತ ಸಿಜಿಕೆ ರಂಗ ಪ್ರಶಸ್ತಿ ಪ್ರಧಾನ ಮಾಡಲಾಯಿತು.</p>.<p>ನಮ್ಮ ತುಳುವೆರ್ ಕಲಾ ಸಂಘಟನೆ ಮುದ್ರಾಡಿ, ಸಂಸ ಥಿಯೇಟರ್ ಬೆಂಗಳೂರು ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್, ನಾಟಕವನ್ನು ಪಂಥಗಳಾಗಿ ವಿಂಗಡಿಸಿ ನೋಡುವ ಬದಲು, ನಾಟಕದಲ್ಲಿ ಜೀವಪರತೆಕಾಣಬೇಕು. ರಂಗ ನಿರ್ದೇಶಕನಿಗೆ ರಂಗದ ಬದ್ಧತೆ ಜೊತೆಗೆ ಸಾಮಾಜಿಕ ಬದ್ಧತೆ ಇರಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಗ್ರಾಮೀಣ ಭಾಗದಲ್ಲಿ ತಯಾರಾಗುವ ನಾಟಕಗಳನ್ನು ನಗರ ಪ್ರದೇಶದಲ್ಲಿ ಪ್ರದರ್ಶಿಸುವುದು ಮುಖ್ಯವಲ್ಲ. ಗ್ರಾಮೀಣ ಭಾಗಗಳಲ್ಲೇನಾಟಕೋತ್ಸವಗಳು ನಡೆಯಬೇಕು. ಸಂತೋಷ್ ನಾಯಕ್ ಪಟ್ಲ ಅದನ್ನು ಬದ್ಧತೆಯಿಂದ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.</p>.<p>ಪ್ರಶಸ್ತಿ ಪ್ರದಾನ ಮಾಡಿದ ಹಿರಿಯ ರಂಗಕರ್ಮಿ ಐ.ಕೆ ಬೊಳುವಾರು ಮಾತನಾಡಿ, ‘ಸಿಜಿಕೆ ರಂಗ ಜಾಣ್ಮೆಯ ಮೂಲಕಬೀದಿನಾಟಕಗಳಿಗೆ ಹೊಸರೂಪವನ್ನು ಕೊಟ್ಟಿದ್ದಾರೆ. ಸಿಜಿಕೆಯ ಜೊತೆ ದುಡಿದವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಾಟಕವನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದರು.</p>.<p>ಕಾರ್ಯಕ್ರಮದಲ್ಲಿ ಪತ್ರಕರ್ತ ಶಶಿಧರ್ ಮಾಸ್ತಿಬೈಲು, ಪಟ್ಲ ಯು.ಎಸ್ ನಾಯಕ್ ಪ್ರೌಢಶಾಲೆಯ ಸಂಚಾಲಕ ಅಣ್ಣಯ್ಯ ನಾಯಕ್ ಪಟ್ಲ, ನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ್ ನಾಯಕ್ ಪಟ್ಲ, ಮುಖ್ಯೋಪಾಧ್ಯಾಯ ಶ್ರೀಕಾಂತ ಪ್ರಭು, ಶಿಕ್ಷಕ ಎಚ್.ಎನ್ ನಟರಾಜ್, ಉಪಸ್ಥಿತರಿದ್ದರು.</p>.<p>ನಮ್ಮ ತುಳುವೆರ್ ಸಂಘಟನೆ ಅಧ್ಯಕ್ಷ ಸುಕುಮಾರ್ ಮೋಹನ್ ಸ್ವಾಗತಿಸಿದರು. ಭೂಮಿಗೀತ ಸಂಘಟನೆ ಅಧ್ಯಕ್ಷ ಸುಧೀರ್ ಕುಮಾರ್ ಪಟ್ಲ ವಂದಿಸಿದರು. ನಾಗೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>