<p><strong>ಉಡುಪಿ:</strong> ಪಾರ್ಸೆಲ್ನಲ್ಲಿ ಮಾದಕ ವಸ್ತು ಬಂದಿರುವುದಾಗಿ ಬೆದರಿಸಿ, ಮಹಿಳೆಯಿಂದ ಹಣ ಪಡೆದು ವಂಚಿಸಿರುವ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸಹಾಯಕ ಪ್ರಾಧ್ಯಾಪಕಿ ಹಾಗೂ ಕುಂಜಿಬೆಟ್ಟು ನಿವಾಸಿ ನಮ್ರತಾ ಎಂಬುವವರ ಮೊಬೈಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ನಿಮಗೆ ಪಾರ್ಸೆಲ್ ಬಂದಿದ್ದು, ಅದರಲ್ಲಿ 5 ಇರಾನ್ನ ಪಾಸ್ಪೋರ್ಟ್, 5 ಡೆಬಿಟ್ ಕಾರ್ಡ್, ಎರಡು ಕೆ.ಜಿ. ಬಟ್ಟೆ ಮತ್ತು 150 ಗ್ರಾಂ ಮಾದಕವಸ್ತು ಪತ್ತೆಯಾಗಿದೆ. ಈ ಕುರಿತು ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆನ್ಲೈನ್ನಲ್ಲಿ ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.</p>.<p>ಅದರಂತೆ ನಮ್ರತಾ ಅವರು ಸ್ಕೈಪ್ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದರು. ಮುಂಬೈ ಪೊಲೀಸರ ಸೋಗಿನಲ್ಲಿ ಇನ್ನೊಬ್ಬ ವ್ಯಕ್ತಿ ವಿಡಿಯೊ ಕರೆ ಮಾಡಿ, ನಮ್ರತಾ ಅವರ ಆಧಾರ್ ಕಾರ್ಡ್, ಬ್ಯಾಂಕ್ ಡೆಬಿಟ್ ಕಾರ್ಡ್ ಮಾಹಿತಿ ಪಡೆದಿದ್ದ. ಅನಂತರ ₹7.90ಲಕ್ಷ ಹಣವನ್ನು ಅಪರಿಚಿತ ವ್ಯಕ್ತಿಯು ತನ್ನ ಖಾತೆಗೆ ವರ್ಗಾಹಿಸಿಕೊಂಡು ಮೋಸ ಮಾಡಿರುವುದಾಗಿ ನಮ್ರತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.</p>.<h2>ವಿದ್ಯಾರ್ಥಿನಿ ಆತ್ಮಹತ್ಯೆ</h2>.<p>ಉಡುಪಿ: ಮಣಿಪಾಲದ ಎಂಐಟಿಯ ಪಿಎಚ್.ಡಿ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮಂಗಳೂರಿನ ಕೋಡಿಕಲ್ ಜೆ.ಬಿ. ಲೊಬೊ ರಸ್ತೆಯ ನಿವಾಸಿ ಬಸವಕುಮಾರ್ ಎಂಬುವವರ ಪುತ್ರಿ ವೈದೇಹಿ (26) ಆತ್ಮಹತ್ಯೆ ಮಾಡಿಕೊಂಡವರು.</p>.<p>ಬಯೋ ಮೆಡಿಕಲ್ ವಿಭಾಗದಲ್ಲಿ ಪಿಎಚ್.ಡಿ ಅಧ್ಯಯನ ನಡೆಸುತ್ತಿದ್ದ ಇವರು ಎಂಐಟಿ ಕ್ವಾರ್ಟರ್ಸ್ನ ಕೋಣೆಯಲ್ಲಿ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಪಾರ್ಸೆಲ್ನಲ್ಲಿ ಮಾದಕ ವಸ್ತು ಬಂದಿರುವುದಾಗಿ ಬೆದರಿಸಿ, ಮಹಿಳೆಯಿಂದ ಹಣ ಪಡೆದು ವಂಚಿಸಿರುವ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸಹಾಯಕ ಪ್ರಾಧ್ಯಾಪಕಿ ಹಾಗೂ ಕುಂಜಿಬೆಟ್ಟು ನಿವಾಸಿ ನಮ್ರತಾ ಎಂಬುವವರ ಮೊಬೈಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ನಿಮಗೆ ಪಾರ್ಸೆಲ್ ಬಂದಿದ್ದು, ಅದರಲ್ಲಿ 5 ಇರಾನ್ನ ಪಾಸ್ಪೋರ್ಟ್, 5 ಡೆಬಿಟ್ ಕಾರ್ಡ್, ಎರಡು ಕೆ.ಜಿ. ಬಟ್ಟೆ ಮತ್ತು 150 ಗ್ರಾಂ ಮಾದಕವಸ್ತು ಪತ್ತೆಯಾಗಿದೆ. ಈ ಕುರಿತು ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆನ್ಲೈನ್ನಲ್ಲಿ ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.</p>.<p>ಅದರಂತೆ ನಮ್ರತಾ ಅವರು ಸ್ಕೈಪ್ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದರು. ಮುಂಬೈ ಪೊಲೀಸರ ಸೋಗಿನಲ್ಲಿ ಇನ್ನೊಬ್ಬ ವ್ಯಕ್ತಿ ವಿಡಿಯೊ ಕರೆ ಮಾಡಿ, ನಮ್ರತಾ ಅವರ ಆಧಾರ್ ಕಾರ್ಡ್, ಬ್ಯಾಂಕ್ ಡೆಬಿಟ್ ಕಾರ್ಡ್ ಮಾಹಿತಿ ಪಡೆದಿದ್ದ. ಅನಂತರ ₹7.90ಲಕ್ಷ ಹಣವನ್ನು ಅಪರಿಚಿತ ವ್ಯಕ್ತಿಯು ತನ್ನ ಖಾತೆಗೆ ವರ್ಗಾಹಿಸಿಕೊಂಡು ಮೋಸ ಮಾಡಿರುವುದಾಗಿ ನಮ್ರತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.</p>.<h2>ವಿದ್ಯಾರ್ಥಿನಿ ಆತ್ಮಹತ್ಯೆ</h2>.<p>ಉಡುಪಿ: ಮಣಿಪಾಲದ ಎಂಐಟಿಯ ಪಿಎಚ್.ಡಿ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮಂಗಳೂರಿನ ಕೋಡಿಕಲ್ ಜೆ.ಬಿ. ಲೊಬೊ ರಸ್ತೆಯ ನಿವಾಸಿ ಬಸವಕುಮಾರ್ ಎಂಬುವವರ ಪುತ್ರಿ ವೈದೇಹಿ (26) ಆತ್ಮಹತ್ಯೆ ಮಾಡಿಕೊಂಡವರು.</p>.<p>ಬಯೋ ಮೆಡಿಕಲ್ ವಿಭಾಗದಲ್ಲಿ ಪಿಎಚ್.ಡಿ ಅಧ್ಯಯನ ನಡೆಸುತ್ತಿದ್ದ ಇವರು ಎಂಐಟಿ ಕ್ವಾರ್ಟರ್ಸ್ನ ಕೋಣೆಯಲ್ಲಿ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>