<p><strong>ಉಡುಪಿ:</strong> ಮಣಿಪಾಲದ ಮಾಹೆಯಲ್ಲಿ ಈಚೆಗೆ ನಡೆದ ಪುರುಷರ ಚೆಸ್ ಚಾಂಪಿಯನ್ಷಿಪ್ನಲ್ಲಿ ಚೆನ್ನೈನ ಎಸ್ಆರ್ಎಂ ಇನ್ಸ್ಟಿಟ್ಯೂಟ್ ಆಫ್ ಸಯನ್ಸ್ ಆ್ಯಂಡ್ ಟೆಕ್ನಾಲಜಿ ತಂಡ ಅಗ್ರಸ್ಥಾನಿಯಾಗಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಚೆಸ್ ಚಾಂಪಿಯನ್ ಪ್ರಶಸ್ತಿಗೆ ಭಾಜನವಾಯಿತು.</p>.<p>ಆಂಧ್ರಪ್ರದೇಶದ ಗುಂಟೂರಿನ ಕೊನೇರು ಲಕ್ಷ್ಮಯ್ಯ ಎಜ್ಯುಕೇಶನ್ ಫೌಂಡೇಷನ್ (ಕೆಎಲ್ಇಎಫ್) ತಂಡ ರನ್ನರ್ಅಪ್ ಪ್ರಶಸ್ತಿಗೆ ಪಾತ್ರವಾಯಿತು.</p>.<p>ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಚೆಸ್ ಚಾಂಪಿಯನ್ ಷಿಪ್ ನಡೆದಿತ್ತು.</p>.<p>ಡಾ.ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ನವದೆಹಲಿಯ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಪರಿವೀಕ್ಷಕ ನರೇಂದ್ರ ಗೌರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.</p>.<p>ಮಾಹೆ ವಿ.ವಿ. ಕ್ರೀಡಾ ಮಂಡಳಿ ಕಾರ್ಯದರ್ಶಿ ವಿನೋದ್ ನಾಯಕ್, ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಾಜ ಗೋಪಾಲ್ ಶೆಣೈ, ಕೆಎಂಸಿ ಡೀನ್ ಡಾ. ಅನಿಲ್ ಕೆ. ಭಟ್, ಸಂಘಟನಾ ಕಾರ್ಯದರ್ಶಿ ಉಪೇಂದ್ರ ನಾಯಕ್ ಉಪಸ್ಥಿತರಿದ್ದರು.</p>.<p>ಮಾಹೆ ಕ್ರೀಡಾ ಕೌನ್ಸಿಲ್ ಹೆಚ್ಚುವರಿ ಕಾರ್ಯದರ್ಶಿ ಕುಮಾರ್ ಎಂ.ಆರ್. ಭಟ್ ಸ್ವಾಗತಿಸಿದರು. ಕೆಎಂಸಿ ಮಂಗಳೂರು ಕ್ರೀಡಾ ನಿರ್ದೇಶಕ ಡಾ. ರಾಜು ವಂದಿಸಿದರು. ಎಂಐಯ ಪ್ರಾಧ್ಯಾಪಕ ಡಾ.ರಾಘವೇಂದ್ರ ಕೆ.ಜಿ. ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಣಿಪಾಲದ ಮಾಹೆಯಲ್ಲಿ ಈಚೆಗೆ ನಡೆದ ಪುರುಷರ ಚೆಸ್ ಚಾಂಪಿಯನ್ಷಿಪ್ನಲ್ಲಿ ಚೆನ್ನೈನ ಎಸ್ಆರ್ಎಂ ಇನ್ಸ್ಟಿಟ್ಯೂಟ್ ಆಫ್ ಸಯನ್ಸ್ ಆ್ಯಂಡ್ ಟೆಕ್ನಾಲಜಿ ತಂಡ ಅಗ್ರಸ್ಥಾನಿಯಾಗಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಚೆಸ್ ಚಾಂಪಿಯನ್ ಪ್ರಶಸ್ತಿಗೆ ಭಾಜನವಾಯಿತು.</p>.<p>ಆಂಧ್ರಪ್ರದೇಶದ ಗುಂಟೂರಿನ ಕೊನೇರು ಲಕ್ಷ್ಮಯ್ಯ ಎಜ್ಯುಕೇಶನ್ ಫೌಂಡೇಷನ್ (ಕೆಎಲ್ಇಎಫ್) ತಂಡ ರನ್ನರ್ಅಪ್ ಪ್ರಶಸ್ತಿಗೆ ಪಾತ್ರವಾಯಿತು.</p>.<p>ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಚೆಸ್ ಚಾಂಪಿಯನ್ ಷಿಪ್ ನಡೆದಿತ್ತು.</p>.<p>ಡಾ.ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ನವದೆಹಲಿಯ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಪರಿವೀಕ್ಷಕ ನರೇಂದ್ರ ಗೌರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.</p>.<p>ಮಾಹೆ ವಿ.ವಿ. ಕ್ರೀಡಾ ಮಂಡಳಿ ಕಾರ್ಯದರ್ಶಿ ವಿನೋದ್ ನಾಯಕ್, ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಾಜ ಗೋಪಾಲ್ ಶೆಣೈ, ಕೆಎಂಸಿ ಡೀನ್ ಡಾ. ಅನಿಲ್ ಕೆ. ಭಟ್, ಸಂಘಟನಾ ಕಾರ್ಯದರ್ಶಿ ಉಪೇಂದ್ರ ನಾಯಕ್ ಉಪಸ್ಥಿತರಿದ್ದರು.</p>.<p>ಮಾಹೆ ಕ್ರೀಡಾ ಕೌನ್ಸಿಲ್ ಹೆಚ್ಚುವರಿ ಕಾರ್ಯದರ್ಶಿ ಕುಮಾರ್ ಎಂ.ಆರ್. ಭಟ್ ಸ್ವಾಗತಿಸಿದರು. ಕೆಎಂಸಿ ಮಂಗಳೂರು ಕ್ರೀಡಾ ನಿರ್ದೇಶಕ ಡಾ. ರಾಜು ವಂದಿಸಿದರು. ಎಂಐಯ ಪ್ರಾಧ್ಯಾಪಕ ಡಾ.ರಾಘವೇಂದ್ರ ಕೆ.ಜಿ. ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>