ಆರೋಪಿಯು ವಿಚಾರಣೆ ವೇಳೆ ‘ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಇಬ್ಬರು ಮಕ್ಕಳೊಂದಿಗೆ ಕುಬ್ಜಾ ಹೊಳೆಗೆ ಇಳಿದ ಸಂದರ್ಭ ಕಂಕುಳಲ್ಲಿದ್ದ ಸಾನ್ವಿಕಾ ಜಾರಿ ಹೊಳೆಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಲಂ 302, 307 ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.