ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಮ್ಮ ಸಾವಿನ ಪ್ರಕರಣ: ತಾಯಿ ವಿರುದ್ಧ ಪ್ರಕರಣ

ಆರೋಪಿಗೆ ಮಾನಸಿಕ ಖಿನ್ನತೆಗೆ ಚಿಕಿತ್ಸೆ
Last Updated 13 ಜುಲೈ 2019, 14:44 IST
ಅಕ್ಷರ ಗಾತ್ರ

ಉಡುಪಿ: ಕುಂದಾಪುರ ತಾಲ್ಲೂಕಿನ ಎಡಮೊಗೆಯ ಕುಮ್ಟಿಬೇರು ಗ್ರಾಮದಲ್ಲಿ ಈಚೆಗೆ 1 ವರ್ಷ 3 ತಿಂಗಳ ಹೆಣ್ಣು ಮಗುವನ್ನು ಅಪಹರಣ ಮಾಡಲಾಗಿದೆ ಎಂಬ ನಾಟಕವಾಗಿ ಸಿಕ್ಕಿಬಿದ್ದ ತಾಯಿ ರೇಖಾ ನಾಯ್ಕ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಆರೋಪಿಯು ವಿಚಾರಣೆ ವೇಳೆ ‘ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಇಬ್ಬರು ಮಕ್ಕಳೊಂದಿಗೆ ಕುಬ್ಜಾ ಹೊಳೆಗೆ ಇಳಿದ ಸಂದರ್ಭ ಕಂಕುಳಲ್ಲಿದ್ದ ಸಾನ್ವಿಕಾ ಜಾರಿ ಹೊಳೆಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಲಂ 302, 307 ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ರೇಖಾ ನಾಯ್ಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವುದರಿಂದ ಶನಿವಾರ ಆಕೆಯನ್ನು ಡಾ.ಎ.ವಿ.ಬಾಳಿಗಾ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಿನ್ನತೆಯಿಂದ ಹೊರಬಂದ ಬಳಿಕ ಪ್ರಕರಣದ ಸಮಗ್ರ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT