<p><strong>ಉಡುಪಿ:</strong> ನಗರದ ಕರಾವಳಿ ಬೈಪಾಸ್ ಬಳಿ ವಾಸವಾಗಿದ್ದ ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ದಂಪತಿಯ ಮಗುವನ್ನು ಕಿಡಿಗೇಡಿಯೊಬ್ಬ ಭಾನುವಾರ ಅಪಹರಿಸಿ ಪರಾರಿಯಾಗಿದ್ದಾನೆ.</p>.<p>ಆರೋಪಿ ಮಗುವನ್ನು ಎತ್ತಿಕೊಂಡು ಕುಂದಾಪುರ ಮಾರ್ಗದ ಬಸ್ ಹತ್ತುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಧೋಳ ತಾಲ್ಲೂಕಿನ ಅರುಣ್ ಹಾಗೂ ಭಾರತಿ ದಂಪತಿಯ ಎರಡೂವರೆ ವರ್ಷದ ಶಿವರಾಜ್ ಅಪಹರಣಕ್ಕೊಳಗಾದ ಮಗು. ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯ ಎಸಗಿರುವ ಸಂಶಯವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p><strong>ಅಪಹರಣ ಹೇಗೆ</strong></p>.<p>ಆರೋಪಿ ಪರಶು ಕೆಲವು ದಿನಗಳ ಹಿಂದಷ್ಟೆ ದಂಪತಿಗೆ ಪರಿಚಿತನಾಗಿದ್ದ. ಪ್ರತಿದಿನ ಮಗುವಿಗೆ ಚಾಕ್ಲೇಟ್ ಕೊಡಿಸಿ ಸಲುಗೆ ಬೆಳೆಸಿಕೊಂಡಿದ್ದ. ಭಾನುವಾರ ಬೆಳಿಗ್ಗೆ ತಿಂಡಿ ಕೊಡಿಸಿಕೊಂಡು ಬರುವುದಾಗಿ ಮಗುವನ್ನು ಕರೆದೊಯ್ದು ಮರಳಿ ಬಂದಿಲ್ಲ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಸಾಕ್ಷ್ಯ ಹಾಗೂ ಬಸ್ನ ಸಿಬ್ಬಂದಿ ಹೇಳಿಕೆಯನ್ನಾಧರಿಸಿ ಉಡುಪಿಯ ಸಂತೆಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಆರೋಪಿಗೆ ಶೋಧ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ನಗರದ ಕರಾವಳಿ ಬೈಪಾಸ್ ಬಳಿ ವಾಸವಾಗಿದ್ದ ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ದಂಪತಿಯ ಮಗುವನ್ನು ಕಿಡಿಗೇಡಿಯೊಬ್ಬ ಭಾನುವಾರ ಅಪಹರಿಸಿ ಪರಾರಿಯಾಗಿದ್ದಾನೆ.</p>.<p>ಆರೋಪಿ ಮಗುವನ್ನು ಎತ್ತಿಕೊಂಡು ಕುಂದಾಪುರ ಮಾರ್ಗದ ಬಸ್ ಹತ್ತುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಧೋಳ ತಾಲ್ಲೂಕಿನ ಅರುಣ್ ಹಾಗೂ ಭಾರತಿ ದಂಪತಿಯ ಎರಡೂವರೆ ವರ್ಷದ ಶಿವರಾಜ್ ಅಪಹರಣಕ್ಕೊಳಗಾದ ಮಗು. ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯ ಎಸಗಿರುವ ಸಂಶಯವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p><strong>ಅಪಹರಣ ಹೇಗೆ</strong></p>.<p>ಆರೋಪಿ ಪರಶು ಕೆಲವು ದಿನಗಳ ಹಿಂದಷ್ಟೆ ದಂಪತಿಗೆ ಪರಿಚಿತನಾಗಿದ್ದ. ಪ್ರತಿದಿನ ಮಗುವಿಗೆ ಚಾಕ್ಲೇಟ್ ಕೊಡಿಸಿ ಸಲುಗೆ ಬೆಳೆಸಿಕೊಂಡಿದ್ದ. ಭಾನುವಾರ ಬೆಳಿಗ್ಗೆ ತಿಂಡಿ ಕೊಡಿಸಿಕೊಂಡು ಬರುವುದಾಗಿ ಮಗುವನ್ನು ಕರೆದೊಯ್ದು ಮರಳಿ ಬಂದಿಲ್ಲ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಸಾಕ್ಷ್ಯ ಹಾಗೂ ಬಸ್ನ ಸಿಬ್ಬಂದಿ ಹೇಳಿಕೆಯನ್ನಾಧರಿಸಿ ಉಡುಪಿಯ ಸಂತೆಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಆರೋಪಿಗೆ ಶೋಧ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>